ಹಳ್ಳದಲ್ಲಿ ಕೊಚ್ಚಿಹೋದ ವ್ಯಕ್ತಿ

ಚಿಕ್ಕಮಗಳೂರು: ಸ್ವಗ್ರಾಮಕ್ಕೆ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ವ್ಯಕ್ತಿಯೊಬ್ಬ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಪೊನ್ನಸ್ವಾಮಿ (45) ಕೊಚ್ಚಿ ಹೋಗಿದ್ದ ವ್ಯಕ್ತಿ. ಹುಲಿತಿಮ್ಮಪುರ ಸಮೀಪದ ಹಳ್ಳದ ಕಿರು ಸೇತುವೆಯಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದೆ.
ಲಿಂಗದಹಳ್ಳಿಯಿಂದ ಸಿದ್ದರಹಳ್ಳಿಗೆ ಹೋಗ್ತಾ ಇದ್ದ ಪೊನ್ನಸ್ವಾಮಿ, ಕಿರುಸೇತುವೆಯ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.

ಬೆಳಗ್ಗೆ ಶೋಧ ಕಾರ್ಯ ನಡೆಸಿದಾಗ, ಕೊಚ್ಚಿ ಹೋದ ಸ್ಥಳದಿಂದ ನೂರು ಮೀಟರ್ ನಲ್ಲಿ ಮೃತದೇಹ ಪತ್ತೆಯಾಗಿದೆ.