ಮರಕಡಿಯುತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದ ಮರದ ಕೊಂಬೆ. ಯುವಕ ಸಾವು

ಬಣಕಲ್ :ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಬಣಕಲ್ ಗ್ರಾಮದ ವಿಲೇಜ್ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.

ದಾಸರಹಳ್ಳಿ ನಿವಾಸಿ ಪ್ರಕಾಶ್ ಮೃತ ಯುವಕ ಎಂದು ತಿಳಿದು ಬಂದಿದೆ.

ಬಣಕಲ್ ವಿಲೇಜ್ ಬಳಿ ತೋಟದಲ್ಲಿ ಮರ ಕಡಿಯುತ್ತಿದ್ದ ವೇಳೆ ಅಲ್ಲೆ ನಿಂತಿದ್ದ ಪ್ರಕಾಶ್ ಅವರ ಮೇಲೆ ಆಕಸ್ಮಿಕವಾಗಿ ಗೆಲ್ಲು ಬಿದ್ದಿದೆ. ಈ ವೇಳೆ ಗಂಭೀರ ಗಾಯಗೊಂಡ ಅವರನ್ನು ಮೂಡಿಗೆರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ.ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.