ಬಣಕಲ್‌ ನಲ್ಲಿ ಬ್ರಹ್ಮಶ್ರೀ ನಾರಾಯಣಗುರು ಮಲಯಾಳಿ ಸಂಘದ ವಾರ್ಷಿಕೋತ್ಸವ

ಬಣಕಲ್:ಜನಸಾಮಾನ್ಯರಿಗೆ ಸರ್ಕಾರಿ ಸವಲತ್ತುಗಳ ಮಾಹಿತಿ ಸಿಕ್ಕರೆ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಬಣಕಲ್‌ನ ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷ ರಾಮಚಂದ್ರ ಹೇಳಿದರು.
ಬಣಕಲ್‌ನ ಬ್ರಹ್ಮಶ್ರೀ ನಾರಾಯಣಗುರು ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರಿ ಸವಲತ್ತುಗಳ ಬಗ್ಗೆ ಸಂಘದಿಂದ ಮುಂದಿನ ದಿನಗಳಲ್ಲಿ ಮಾಹಿತಿ ಕಾರ್ಯಕ್ರಮಗಳನ್ನು ನೀಡಲಾಗುವುದು. ಸಂಘಟಿತವಾಗಿ ಕಾರ್ಯ ನಿರ್ವಹಿಸುವುದರಿಂದ ಸರ್ವಾಂಗೀಣ ಅಭಿವೃದ್ದಿ ಸಾಧಿಸಲು ಸಾಧ್ಯವಾಗುತ್ತದೆ. ಬಣಕಲ್‌ನ ಬ್ರಹ್ಮಶ್ರೀ ನಾರಾಯಣಗುರು ಸಂಘದಿಂದ ಸಮುದಾಯದ ಅನಾರೋಗ್ಯ ಪೀಡಿತರಿಗೆ ನೆರವು, ಮೃತರ ಮನೆಗಳಿಗೆ ಭೇಟಿ ನೀಡಿ ಧನ ಸಹಾಯ, ಕೋವಿಡ್ ಸಂದರ್ಭಗಳಲ್ಲಿ ಆಹಾರ ಕಿಟ್ ವಿತರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದರು.
ಮೂಡಿಗೆರೆ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ್ ಮಾತನಾಡಿ, ಸಾಮಾಜಿಕವಾಗಿ ಸಕ್ರಿಯವಾಗಿ ತೊಡಗಿಕೊಳ್ಳಲು ಸಂಘಟನೆಗಳ ಪಾತ್ರ ಮಹತ್ವದಾಗಿದ್ದು ವ್ಯಯಕ್ತಿಕ ಏಳಿಗೆಯ ಜೊತೆಗೆ ಸಮುದಾಯದ ಏಳಗೆಯೂ ಸಾಧ್ಯವಾಗಿಸಲು ಸಂಘಟನೆಗಳಲ್ಲಿ ತೊಡಗಿಸಿಕೊಳ್ಳುವುದು ಅವಶ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರು ಸಂಘದ ಬಣಕಲ್, ಬಾಳೂರು. ಕೆಳಗೂರು, ಹಿರೇಬೈಲ್, ಕುನ್ನಹಳ್ಳಿ, ಮುತ್ತಿಗೆಪುರ, ಗೋಣಿಬೀಡು, ಮೂಡಿಗೆರೆ ನಗರ, ಬಿಳುಗುಳ ಭಾಗದ ಪದಾಧಿಕಾರಿಗಳು, ಸದಸ್ಯರು ಇದ್ದರು.