ಪೊಲೀಸ್ ಇಲಾಖೆಯಿಂದ ಕುಂದು ಕೊರತೆ ಸಭೆ

ಬಣಕಲ್: ಅಕ್ರಮ ಮಧ್ಯ ಮಾರಾಟ ಮತ್ತು ಜೂಜಾಟವನ್ನು ತಡೆಗಟ್ಟುವುದರ ಜೊತೆಗೆ ಯಾವುದೆ ರೀತಿಯ ಅಕ್ರಮ ಚಟುವಟಿಕೆಗಳು ನಡೆಯದಂತೆ ಸೂಕ್ತವಾದ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ಪಿಎಸ್‍ಐ ಗಾಯಿತ್ರಿ ತಿಳಿಸಿದರು.

       ಪಟ್ಟಣದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾರ್ವಜನಿರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪಟ್ಟಣ ಸೇರಿದಂತೆ ಗ್ರಾಮೀಣ ಪ್ರಧೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಅತ್ಯವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ತಿಳಿಸಿದರು.

ಗ್ರಾಮೀಣ ಭಾಗಗಳಲ್ಲಿ ಅಕ್ರಮವಾಗಿ ಜೂಜಾಡುವುದನ್ನು ಹಾಗೂ ಗಾಂಜಾ ವ್ಯಸನಿಗಳನ್ನು ಎಡೆಮುರಿ ಕಟ್ಟಲಾಗುವುದು ಎಂದರು,ಶಾಶ್ವತವಾಗಿ ನಿಯಂತ್ರಿಸಲು ಸೂಕ್ತವಾದ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

        ಮಹಿಳಾ ದೌರ್ಜನ್ಯದ ಬಗ್ಗೆ ದೂರುಗಳು ಬಂದಲ್ಲಿ ಅತಿ ತುರ್ತಾಗಿ ಕ್ರಮವಹಿಸಲಾಗುವುದೆಂದು ತಿಳಿಸಿದ ಅವರು ಪಟ್ಟಣದ ಸರ್ಕಲ್ ಮತ್ತು ಬಸ್ ನಿಲ್ದಾಣಗಳಲ್ಲಿ ಸಿಸಿ ಟಿವಿ ಅಳವಡಿಸಲಾಗುವುದು ಯಾವುದೆ ರೀತಿಯ ಅಕ್ರಮ ರೀತಿಯ ಅಕ್ರಮ ಚಟುವಟಿಗಳು ನಡೆಯದಂತೆ ಅಗತ್ಯ ಎಚ್ಚರಿಕೆ ವಹಿಸಿರುವುದಾಗಿ ತಿಳಿಸಿದರು. ರಸ್ತೆ ಸುರಕ್ಷತೆ ಸೇರಿದಂತೆ ಸಂಚಾರ ನಿಯಮಗಳ ಬಗ್ಗೆ ಈಗಾಗಲೆ ಅರಿವು ಮೂಢಿಸಲಾಗಿದೆ ಎಂದು ತಿಳಿಸಿದರು.

      ಸಭೆಯಲ್ಲಿ ಗ್ರಾಮದ ಮುಖಂಡರು ಅಂಗಡಿ ಮಾಲೀಕರು ಆಟೋ ಚಾಲಕರು ಬಾಗವಹಿಸಿದ್ದರು