ಬಣಕಲ್ ನ ಶ್ರೀಮಹಮ್ಮಾಯಿ ದುರ್ಗಾಪರಮೇಶ್ವರಿ ದೇವಾಲಯದಲ್ಲಿ ಭಕ್ತಿ ಸಡಗರದ ನಾಗರ ಪಂಚಮಿ ಆಚರಣೆ

ಬಣಕಲ್ :ಇಂದು ನಾಗರ ಪಂಚಮಿ ಹಬ್ಬವನ್ನು ದೇಶಾದ್ಯಂತ ಸಂಭ್ರಮ ಸಡಗರದಿಂದ ಎಲ್ಲೆಡೆ ಆಚರಿಸಲಾಯಿತು . ಇಂದು ಬಣಕಲ್ ನ ಶ್ರೀ ಮಹಮ್ಮಾಯಿ ದುರ್ಗಾಪರಮೇಶ್ವರಿ ದೇವಾಲಯಕ್ಕೆ ನೂರಾರು ಭಕ್ತರು ತೆರಳಿ ನಾಗನಿಗೆ ಹೂವು ಹಾಗೂ ಹಾಲಿನ ಅಭಿಷೇಕ ಮಾಡಿದರು. ದೇವಸ್ಥಾನದಲ್ಲಿ ನಾಗರ ಪಂಚಮಿಯನ್ನು ವಿಶೇಷವಾಗಿ ಆಚರಿಸಲಾಯಿತು.ಮಹಿಳೆಯರು ಹಾಗೂ ಪುರುಷರು ನಾಗಮೂರ್ತಿಗೆ ಹಾಲಿನ ಅಭಿಷೇಕ ಮಾಡಿ ನಾಗನ ಆಶೀರ್ವಾದ ಪಡೆದರು.
ಶ್ರಾವಣದ ಹಬ್ಬಗಳ ಸಾಲಿಗೆ ಈ ಹಬ್ಬ ಮುನ್ನುಡಿ. ಸಾಲು ಹಬ್ಬಗಳ ಪೈಕಿ ಮೊದಲನೆಯದು ನಾಗಪಂಚಮಿ. ಈ ಹಬ್ಬದಲ್ಲಿ ನಾಗಪ್ಪ ಅಥವಾ ಸುಬ್ರಹ್ಮಣ್ಯ ಸ್ವಾಮಿಗೆ ಪೂಜೆ ನಡೆಯುತ್ತದೆ. ಈ ಹಬ್ಬವನ್ನು ಬಹಳ ನೇಮ, ನಿಷ್ಠೆಯಿಂದ ಆಚರಿಸುತ್ತಾರೆ.

ನಾಗ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲ ಪಕ್ಷ ದ ಪಂಚಮಿಯಂದು ಆಚರಿಸಲಾಗುತ್ತದೆ. ಈ ಹಬ್ಬವನ್ನು ಪಂಚಮಿ ಹಬ್ಬ, ಒಡಹುಟ್ಟಿದವರ ಹಬ್ಬ ಎಂದೂ ಕರೆಯುತ್ತಾರೆ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಳ್ಳುವುದು ಪ್ರತೀತಿ.