ಚಾರ್ಮಾಡಿ ಘಾಟಿಯಲ್ಲಿ ಬಣಕಲ್ ಪೊಲೀಸರಿಂದ ಬ್ಯಾರಿಕೆಡ್ ಅಳವಡಿಕೆ

ಬಣಕಲ್ :ಉತ್ತಮ ಗುಣಮಟ್ಟದ ರಸ್ತೆಗಳಿದ್ದರೂ ಸಹ ಚಾರ್ಮಾಡಿ ಘಾಟಿಯಲ್ಲಿ ಮಂಜು ಕವಿದ ವಾತಾವರಣ ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲಿಸುವುದರ ಜೊತೆಗೆ ತಾಳ್ಮೆಯಿಂದ ವಾಹನ ಚಾಲನೆ ಮಾಡಬೇಕು ಎಂದು ಪಿ.ಎಸ್.ಐ ಜಂಬೂರಾಜ್ ಮಹಾಜನ್ ತಿಳಿಸಿದರು.

ಇಂದು ಚಾರ್ಮಾಡಿ ಘಾಟಿಯ ಬಣಕಲ್ ಠಾಣಾ ವ್ಯಾಪ್ತಿಯ ಪ್ರದೇಶಗಳಲ್ಲಿ ಅಪಘಾತ ತಡೆಗಟ್ಟಲು ಬ್ಯಾರಿಕೆಡ್ ಗಳನ್ನು ಅಳವಡಿಸಲಾಯಿತು. ಯುವಕರು ರಸ್ತೆ ನಿಯಮಗಳನ್ನು ಸರಿಯಾಗಿ ಪಾಲಿಸಬೇಕುಚಾರ್ಮಾಡಿ ಘಾಟಿಯ ತಿರುವಿನ ಬಳಿ ರಸ್ತೆ ಬದಿಯ ಮೋರಿಗಳು ಬಿರುಕು ಬಿಟ್ಟಿದೆ. ಬಿರುಕು ಬಿಟ್ಟ ಪ್ರದೇಶದಲ್ಲಿ ಬ್ಯಾರಿಕೆಡ್ ಅಳವಡಿಸಿ, ಮುಂಜಾಗ್ರತ ಕ್ರಮವನ್ನು ಬಣಕಲ್ ಪೊಲೀಸರು ಕೈ ಗೊಂಡರು.ಬಸ್ ಲಾರಿ ಮೊದಲಾದ ಘನ ವಾಹನಗಳು ಸಂಚರಿಸುವಾಗ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಪೊಲೀಸರು ತಿಳಿಸಿದರು.

ಈ ಸಂದರ್ಭದಲ್ಲಿ ಬಣಕಲ್ ಠಾಣೆಯ ASI ಶಶಿ, ಜಗದೀಶ್, ಸಿಬ್ಬಂದಿ ವರ್ಗ ಹಾಜರಿದ್ದರು