ಬಣಕಲ್ ನಲ್ಲಿ ಅಂಚೆ ಜನ ಸಂಪರ್ಕ ಸಭೆ

ಬಣಕಲ್ :ಬಣಕಲ್ ಗ್ರಾ.ಪಂ. ಸಭಾಂಗಣದಲ್ಲಿ ಅಂಚೆ ಇಲಾಖೆ ವತಿಯಿಂದ ಜನ ಸಂಪರ್ಕ ಸಭೆಯನ್ನು ಸೋಮವಾರ ಆಯೋಜನೆ ಮಾಡಿದ್ದರು.

ಬಣಕಲ್ ವ್ಯಾಪ್ತಿಯ ಸುತ್ತಮುತ್ತಲಿನ ನೂರಾರು ಜನರು ಆಗಮಿಸಿ ಆಧಾರ್ ಕಾರ್ಡ್ ತಿದ್ದುಪಡಿಯ ಸದುಪಯೋಗ ಪಡಿಸಿಕೊಂಡರು.ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಕ್ಕಮಗಳೂರು ಜಿಲ್ಲಾ ಅಂಚೆ ಅಧಿಕ್ಷಕ ಎನ್. ರಮೇಶ್ ರಾಷ್ಟ್ರದಲ್ಲಿ ಅಂಚೆ ಇಲಾಖೆ (Department of Post) ಈ ಮೊದಲು ಸಂಪರ್ಕ ಸಾಧನೆಗೆ ಮಾತ್ರ ಮೀಸಲಾಗಿತ್ತು.

ಈ ಇಲಾಖೆ ಇದೀಗ ನೂರಕ್ಕೂ ಹೆಚ್ಚು ಸೇವೆಗಳನ್ನು ಗ್ರಾಹಕರಿಗೆ ಒದಗಿಸುವ ಮೂಲಕ ಜಗತ್ತಿನಲ್ಲಿಯೇ (World) ಅತಿ ಹೆಚ್ಚು ಗ್ರಾಹಕರನ್ನು (Customers) ಹೊಂದಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.