ರಸ್ತೆ ಮೇಲೆ ಗುಂಡಿಯೋ? ಗುಂಡಿಯಲ್ಲಿ ರಸ್ತೆಯೋ!ಗೊಂದಲದಲ್ಲಿಯೇ ವಾಹನ ಸವಾರರ ಸಂಚಾರ, ಹದಗೆಟ್ಟ ಬಸನಿ ಗ್ರಾಮದ ಕಲ್ಯಾಣಗದ್ದೆ ರಸ್ತೆ

ಬಣಕಲ್ :ಮೂಡಿಗೆರೆ ತಾಲ್ಲೂಕು ಬಣಕಲ್ ಸಮೀಪದ ಹೆಗ್ಗುಡ್ಲು ಗ್ರಾಮದ ಕಲ್ಯಾಣ ಗದ್ದೆ ಮಾರ್ಗದ ರಸ್ತೆಯು ಸಂಪೂರ್ಣ ಹದಗೆಟ್ಟು ಮೊಣಕಾಲುದ್ದದ ಗುಂಡಿಗಳು ನಿರ್ಮಾಣವಾಗಿದೆ. ಇದರಲ್ಲಿ ರಸ್ತೆ ಯಾವುದು ಗುಂಡಿ ಯಾವುದು ಎಂದು ತಿಳಿಯದ ವಾಹನ ಸವಾರರು ಗೊಂದಲಕ್ಕೀಡಾಗಿ ಪರದಾಡುವಂತಾಗಿದೆ. ಸಂಚಾರಕ್ಕೆ ಅಯೋಗ್ಯವಾಗಿವೆ. ರಸ್ತೆಗಳ ಮರು ಡಾಮರು ಅಥವಾ ತೇಪೆ ಕಾರ್ಯಕ್ಕೆ ಕಳೆದ ಐದು ವರ್ಷಗಳಿಂದ ಇಲಾಖೆಗಳು ಮತ್ತು ಜನಪ್ರತಿನಿಧಿಗಳು ಅನುದಾನ ಅಲಭ್ಯತೆಯ ಸಬೂಬು ಹೇಳಿಕೊಂಡೆ ಬಂದಿದ್ದಾರೆ .

“ರಸ್ತೆಗೆ ಡಾಂಬರು ಹಾಕಿ ವರ್ಷಗಳೇ ಉರುಳಿ ಹೋಗಿದೆ, ಈಗ ಡಾಂಬರು ಎಲ್ಲಿದೆ ಎಂದು ಹುಡುಕಾಟ ಮಾಡಬೇಕಿದೆ. ಎಲ್ಲ ಕಡೆ ಜಲ್ಲಿ ಕಲ್ಲುಗಳು ಮೇಲೆ ಬಂದು ರಸ್ತೆಯಲ್ಲಿ ಹರಡಿಕೊಂಡಿವೆ. ಇದರಿಂದ ದ್ವಿಚಕ್ರ ವಾಹನಗಳು ಆಯಾ ತಪ್ಪಿ ಬಿದ್ದು, ಸವಾರರು ಗಾಯಗೊಂಡು ಆಸ್ಪತ್ರೆ ಸೇರುವಂತಾಗಿದೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ಈ ಮಾರ್ಗದಲ್ಲಿ ಸಂಚಾರ ಮಾಡುವವರು ಮೈಯೆಲ್ಲಾ ಕಣ್ಣಾಗಿಸಿಕೊಂಡೆ ವಾಹನ ಚಲಾಯಿಸಬೇಕು ಎಚ್ಚರ ತಪ್ಪಿದರೆ ಅಪಾಯ ಎದುರಾಗುವುದು ನಿಶ್ಚಿತ. ಗುಂಡಿ ತಪ್ಪಿಸುವ ಭರದಲ್ಲಿ ದ್ವಿಚಕ್ರ ವಾಹನ ಸವಾರರು ಲೆಕ್ಕವಿಲ್ಲದಷ್ಟು ಬಾರಿ ಬಿದ್ದು ಗಾಯಗೊಂಡಿದ್ದಾರೆ. ಹೀಗಿದ್ದರೂ ರಸ್ತೆ ದುರಸ್ತಿಗೊಳಿಸುವ ಕೆಲಸ ಆಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗಳಲ್ಲಿ ಕಬ್ಬಿಣದ ರಾಡುಗಳು ಮೇಲಕ್ಕೆ ಕಾಣಸಿಗುತ್ತವೆ ಆಯತಪ್ಪಿ ಬಿದ್ದರೆ ಜೀವ ಹೋಗುವುದಂತೂ ಖಾತಾರಿ. ಸಮಸ್ಯೆ ತಿವ್ರತೆಯ ಅರಿವಿದ್ದರೂ ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ನಾಗರಿಕರ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ದಯವಿಟ್ಟು ಅಧಿಕಾರಿಗಳು ಜನಪ್ರತಿನಿದಿನಗಳು ಇದರ ಬಗ್ಗೆ ಗಮನ ಹರಿಸಿ ಶೀಘ್ರ ಇತ್ಯಾರ್ಥ ಪಡಿಸಬೇಕು ಎಂಬುದು ಗ್ರಾಮಸ್ಥರ ಅಗ್ರಹ.

ವರದಿ ✍️ಸೂರಿ ಬಣಕಲ್