*ಕುಡಿದ ಮತ್ತಿನಲ್ಲಿ ಸಹೋದರನ ಅತ್ತೆ ಕೊಲೆ*

ಮೂಡಿಗೆರೆ – ಬಣಕಲ್
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಬಾರತಿ ಬೈಲ್ ಗ್ರಾಮದಲ್ಲಿ ಕುಡಿದು ಗಲಾಟೆ ಮಾಡುತ್ತಿದ್ದವನಿಗೆ ಬುದ್ದಿವಾದ ಹೇಳಿದ ಸಹೋದರನ ಪತ್ನಿಯ ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.


ಚಿಕ್ಕಮಗಳೂರು ತಾಲೂಕಿನ ಕಣತಿ ಗ್ರಾಮದ ದರಣಪ್ಪ ಪೂಜಾರಿ ಅವರ ಪತ್ನಿ ಯಮುನಾ ಕೊಲೆಯಾದ ದುರ್ದೈವಿ.
ಆರು ತಿಂಗಳಿಂದ ಪುತ್ರಿಯ ಮನೆ ಭಾರತಿ ಬೈಲ್ ಗ್ರಾಮಕ್ಕೆ ಬಂದು ನೆಲೆಸಿದ್ದ ಯಮುನಾ ಅವರು ಭಾನುವಾರ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಮಗಳ ಮನೆಗೆ ಬಂದಿದ್ದರು. ಆಗ ಮನೆಯಲ್ಲಿ ಕುಡಿದು ಜಗಳವಾಡುತ್ತಿದ್ದ ಮಗಳ ಗಂಡನ ಅಣ್ಣ ಶಶಿಧರ ಪೂಜಾರಿಗೆ ಯಮುನಾ ಬುದ್ದಿವಾದ ಹೇಳಿದ್ದಾರೆ. ಇದರಿಂದ ಕೋಪಗೊಂಡ ಶಶಿಧರ ಪೂಜಾರಿ ಸುತ್ತಿಗೆಯಿಂದ ಯಮುನಾ ಅವರ ತಲೆಗೆ ಹೊಡೆದಿದ್ದಾನೆ ಯಮುನಾ ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ . ಕೂಡಲೇ ಅವರನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಯಮುನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಆರೋಪಿ ಶಶಿಧರ ಪೂಜಾರಿ ಈಗಾ ಪರಾರಿಯಾಗಿದ್ದಾನೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.