ಚಿಕ್ಕಮಗಳೂರು : ಭದ್ರಾ ನದಿಗೆ ಈಜಲು ಸ್ನೇಹಿತರೊಂದಿಗೆ ತರಳಿದ್ದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಎನ್.ಆರ್.ಪುರ ತಾಲೂಕಿನ ಗಡಿಗೇಶ್ವರದಲ್ಲಿ ರವಿವಾರ(ಫೆ.16) ನಡೆದಿದೆ.
ಜಲಾಲ್(25) ನೀರುಪಾಲಾದ ಯುವಕ ಎಂದು ತಿಳಿದು ಬಂದಿದೆ. ಮೂವರು ಸ್ನೇಹಿತರು ಬಾಳೆಹೊನ್ನೂರಿನ ಭದ್ರಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ಜಲಾಲ್ ನದಿಯ ಸುಳಿಗೆ ಸಿಲುಕಿ ನೀರು ಪಾಲಾಗಿದ್ದಾನೆ. ಸ್ನೇಹಿತರು ಆತನನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ.
ಘಟನೆ ಸಂಬಂಧ ಸ್ಥಳಕ್ಕಾಗಮಿಸಿದ ಪೊಲೀಸರು , ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಜಲಾಲ್ ದೇಹಕ್ಕಾಗಿ ಶೋಧಕಾರ್ಯಾಚರಣೆ ನಡೆಸಿದರು. ಆದರೆ ಶವದ ಸುಳಿವು ಸಿಕ್ಕಿರಲಿಲ್ಲ. ಫೆ17 ಮಂಗಳವಾರದಂದು ಪ್ರಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ತಂಡದವರು ಆಗಮಿಸಿ ಶೋದ ನಡೆಸಿ ಮೃತದೇಹವನ್ನು ಮೇಲಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಮೃತ ದೇಹವನ್ನು ಸುಮಾರು ಅರ್ಧ ಕಿಲೋಮೀಟರ್ ದೂರದಿಂದ ಹೊತ್ತುಕೊಂಡು ಬಂದು ಕುಟುಂಬದವರಿಗೆ ಅಸ್ತಾಂತರಿಸಿದ್ದಾರೆ.
ವರದಿ :✍️ಸೂರಿ ಬಣಕಲ್