ಉಡುಪಿ ಜಿಲ್ಲೆಯ ಶಿರೂರಿನಲ್ಲಿ ನಡೆದ ವಲಯ ಮಟ್ಟದ ಚೆಸ್ ಕ್ರೀಡಾಕೂಟ :ನಜರೆತ್ ಶಾಲೆಯ ವಿದ್ಯಾರ್ಥಿ ಸುವಿದ್ ಪ್ರಥಮ ಸ್ಥಾನ

ಬಣಕಲ್ :ಉಡುಪಿ ಜಿಲ್ಲೆಯ ಶಿರೂರಿನ ಗ್ರೀನ್ ವ್ಯಾಲಿ ಶಾಲೆಯಲ್ಲಿ ನಡೆದ 7 ಜಿಲ್ಲೆಗಳನ್ನೊಳಗೊಂಡ ವಲಯ ಮಟ್ಟದ ಚೆಸ್ ಕ್ರೀಡಾಕೂಟದಲ್ಲಿ ನಜರೆತ್ ಶಾಲೆಯ ಸುವಿಧ್ ಪಿ 14ರ ವಯೋಮಾನದ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾನೆ. ಇವನ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.