ಕೆರೆ ಒತ್ತುವರಿದಾರರಿಗೆ ಬಿಗ್ ಶಾಕ್ ಇನ್ಮುಂದೆ ಪ್ರತಿ ಶನಿವಾರ ಕೆರೆ ಒತ್ತುವರಿ ತೆರವು ಕಾರ್ಯಾಚರಣೆ

ಬೆಂಗಳೂರು : ರಾಜ್ಯದಲ್ಲಿ ಕೆರೆ ಒತ್ತುವಾರಿ ಮಾಡಿಕೊಂಡವರ ವಿರುದ್ಧ ಸರ್ಕಾರ ಸಮರ ಸಾರಲು ಮುಂದಾಗಿದೆ. ಇನ್ಮುಂದೆ ಪ್ರತಿ ಶನಿವಾರ ಕೆರೆ ಒತ್ತುವರಿ ಕಾರ್ಯಾಚರಣೆ ನಡೆಸೋದಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಕೆರೆ ಒತ್ತುವರಿದಾರರಿಗೆ ಬಿಗ್ ಶಾಕ್ ನೀಡಿದೆ.ಈ ಕುರಿತಂತೆ ಸದನದಲ್ಲಿ ಕೆರೆ ಒತ್ತುವರಿ ತೆರವು ಕುರಿತಂತೆ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಅಪ್ಪಾಜಿಗೌಡ ಪ್ರಶ್ನೆಗೆ ಉತ್ತರಿಸಿದಂತ ಕಂದಾಯ ಸಚಿವ ಆರ್.ಅಶೋಕ್ ಅವರು, ಬೆಂಗಳೂರಿನ ಹಲವು ಕೆರೆ ಜಾಗಗಳಲ್ಲಿ ಬಸ್ ನಿಲ್ದಾಣ, ಬಿಡಿಎ ಲೇಔಟ್ ತಲೆ ಎತ್ತಿದ್ದಾವೆ. ಕೆರೆ ಒತ್ತುವರಿಯಲ್ಲಿ ಬಿಡಿಎ ಮೊದಲ ಸ್ಥಾನದಲ್ಲಿದ್ದರೇ, ಖಾಸಗಿಯವರು 2ನೇ ಸ್ಥಾನದಲ್ಲಿದ್ದಾರೆ ಎಂದರು. ಈ ಹಿಂದೆ ಇದೆಲ್ಲಾ ಆಗಿದೆ.. ಆದ್ರೇ.. ಈಗ ಹಾಗೆ ಆಗೋದಕ್ಕೆ ಬಿಡೋದಿಲ್ಲ. ಪ್ರತಿ ಶನಿವಾರ ಡಿಸಿಗಳು ಕೆರೆಗಳ ಒತ್ತುವರಿ ತೆರವು ಮಾಡಲು ಸೂಚನೆ ನೀಡಲಾಗಿದೆ. ಈಗ ಇರುವ ಕೆರೆಗಳನ್ನು ಉಳಿಸೋ ಕೆಲಸ ಮಾಡಬೇಕಿದೆ. ಆ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.