ಚಿಕ್ಕಮಗಳೂರು :ಏಕಮುಖ ಸಂಚಾರಕ್ಕೆ ವಾಹನಗಳಿಗೆ ಅವಕಾಶ ಮಾಡಿಕೊಡಲಾಗಿತ್ತು ಆದರೆ ಇದೀಗ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ನಿರ್ಬಂಧ ವಿಧಿಸಲಾಗಿದೆ ಈ ಕುರಿತಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು ಭಾರಿ ಮಳೆಯಿಂದ ಬೆಟ್ಟ ಕುಸಿತ ಹಾಗೂ ದುರಸ್ಥಿ ಕಾಮಗಾರಿಯ ದೃಷ್ಟಿಯಿಂದಾಗಿ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಪರ್ಕ ರಸ್ತೆ ಚಾರ್ಮಾಡಿ ಘಾಟಿಯಲ್ಲಿ ಸಂಜೆ 7ಗಂಟೆಯಿಂದ ಬೆಳಗ್ಗೆ 6ಗಂಟೆವರೆಗೆ ವಾಹನ ಸಂಚಾರವನ್ನು ನಿರ್ಬಂದಿಸಲಾಗಿದೆ ಚಾರ್ಮಾಡಿ ಘಾಟಿಯಲ್ಲಿ ಕೈ ಗೊಂಡಿರುವಂತ ರಾತ್ರಿ ಸಂಚಾರದ ನಿರ್ಬಂಧವು ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಆಗಿದೆ ವಾಹನ ಸವಾರರು ರಾತ್ರಿಯ ವೇಳೆಯಲ್ಲಿ ಬೆಂಗಳೂರು ಮತ್ತು ಮಂಗಳೂರಿಗೆ ತೆರಳೋದಕ್ಕಾಗಿ ಪರ್ಯಾಯ ಮಾರ್ಗದ ಮೂಲಕ ತೆರಳುವಂತೆ ಸೂಚಿಸಲಾಗಿದೆ
ಬಣಕಲ್ ನ್ಯೂಸ್ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.