ಮೂಡಿಗೆರೆ :ಮೂಡಿಗೆರೆ ವಿಧಾನ ಸಭಾ ಕ್ಷೇತ್ರದ ಬಾಳೂರು ಹೋಬಳಿಯಲ್ಲಿ ಇಂದು ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿಗಳಾದ ಎಂ.ಕೆ.ಪ್ರಾಣೇಶ್ ಗ್ರಾಮ ಪಂಚಾಯಿತಿ ಸದಸ್ಯರ ಬಳಿ ಮತ ಯಾಚಿಸಿ,ಗ್ರಾಮ ಪಂಚಾಯಿತಿ ಸದಸ್ಯರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ನನ್ನ ಆರು ವರ್ಷಗಳ ಅವಧಿಯಲ್ಲಿ ಎಲ್ಲಾದರೂ ನನ್ನ ವಿರುದ್ಧ ಭ್ರಷ್ಟಾಚಾರ ಸಾಬೀತು ಪಡಿಸಿದರೆ ಕೂಡಲೇ ರಾಜಕೀಯ ನಿವ್ರತ್ತಿ ಪಡೆಯುತ್ತೇನೆ, ಗ್ರಾಮ ಪಂಚಾಯಿತಿಗಳಿಗೆ ಜನರೇಟರ್ ವ್ಯವಸ್ಥೆ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದೆನೆ ಎಂದರು, ಮೂಡಿಗೆರೆ ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಮಾತನಾಡಿ ವಿಧಾನ ಪರಿಷತ್ ಸದಸ್ಯರನ್ನು ಗೆಲ್ಲಿಸುವುದರ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸಿ,ಮೂಡಿಗೆರೆ ಭಾಗದಲ್ಲಿ ಅಖಾಲಿಕ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು ಸದ್ಯದಲ್ಲೇ ಕಂದಾಯ ಸಚಿವ ಆರ್, ಅಶೋಕ್ ಅವರು ಭೇಟಿ ನೀಡಲಿದ್ದಾರೆ ಎಂದರು
,ತಾಲೂಕು ಬಿಜೆಪಿ ಅಧ್ಯಕ್ಷ ರಘು ಜನ್ನಾಪುರ ,ಭರತ್ ಬಾಳೂರು, ಪರೀಕ್ಷಿತ್ ಜಾವಳಿ, ಶಶಿಧರ್, ಶಿವರಾಜ್, ಜಗದೀಶ್ ಗೌಡ,ಅರೇಕೂಡಿಗೆ ಶಿವಣ್ಣ,ಮರ್ಕಲ್ ವಿಜೇಂದ್ರ, ದೀಪಕ್ ದೊಡ್ಡಯ್ಯ, ಗಜೇಂದ್ರ ಕೊಟ್ಟಿಗೆಹಾರ,ರಘುಪತಿ ಬಾಳೂರು, ಅಜಿತ್ ದುರ್ಗದಹಳ್ಳಿ ,ಪಂಚಾಕ್ಷರಿ, ಶಶಿಕುಮಾರ್, ಮನೋಜ್, ಬಾಳೂರು ಹೋಬಳಿಯ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಬಿಜೆಪಿ ಮುಖಂಡರು ಹಾಜರಿದ್ದರು
