ಬಣಕಲ್:ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಬಣಕಲ್ ಕ್ರೈಸ್ತರ ಅಭಿವೃದ್ಧಿ ಸಂಘದಿಂದ ಬಣಕಲ್ ಚರ್ಚ್ ಹಾಲ್ ನಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಿ ಕಮರಿಯ ದೇವಾಲಯದ ಗುರುಗಳಾದ ವಂದನೀಯ ಸ್ವಾಮಿ ಆಲ್ಬರ್ಟ್ ಡಿಸಿಲ್ವ ವಹಿಸಿದ್ದರು ಕಾರ್ಯಕ್ರಮದ ಗೌರವ ಅಧ್ಯಕ್ಷರಾಗಿ ಮಾಜಿ ಸಚಿವೆ ಶ್ರೀಮತಿ ಮೋಟಮ್ಮರವರು ಪಾಲ್ಗೊಂಡಿದ್ದರು.ಗುರುಗಳಾದ ಆಲ್ಬರ್ಟ್ ಡಿಸಿಲ್ವ ಮಾತನಾಡಿ ಹೆಣ್ಣು ಸಮಾಜದ ಕಣ್ಣು, ಬದುಕಿನ ಎಲ್ಲಾ ಸವಾಲಗಳನ್ನು ಎದುರಿಸಿ ನಿಲ್ಲುವ ಗಟ್ಟಿಗಿತ್ತಿ ಆಕೆ. ಅದಕ್ಕೇ ಹೇಳುವುದು ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೇ ಸಾಕೇ… ಎಂದು. ಎಲ್ಲಾ ಕಷ್ಟದ ದಿನಗಳನ್ನು ಎದುರಿಸಿ ಇಂದು ಎಲ್ಲಾ ಕ್ಷೇತ್ರಗಳಲ್ಲೂ ತನ್ನ ಛಾಪು ಮೂಡಿಸಿದ ಆಕೆಯ ಸ್ಥೈರ್ಯದ ವಿವರಣೆಗೆ ಬೇರೆ ಪದಗಳು ಬೇಕಾಗಿಲ್ಲ ಎಂದರು. ಮಾಜಿ ಸಚಿವೆ ಮೋಟಮ್ಮರವರು ಮಾತನಾಡಿ ಹೆಣ್ಣು ಮಗಳಾಗಿ, ಪತ್ನಿಯಾಗಿ, ತಾಯಿಯಾಗಿ, ಸ್ನೇಹಿತೆಯಾಗಿ ಎಲ್ಲಾ ಪಾತ್ರಗಳನ್ನು ತುಂಬುವ ಆಕೆಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಂದು ದಿನ ಮೀಸಲಿದೆ. ಅದುವೇ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಪ್ರತೀ ವರ್ಷ ಮಾರ್ಚ್ 8 ರಂದು ಮಹಿಳಾ ದಿನಾಚರಣೆ (Women’s Day) ಯನ್ನು ಆಚರಿಸಲಾಗುತ್ತದೆ. ಬಡ, ದುರ್ಬಲ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಿ, ಸುಂದರ ಬದುಕು ರೂಪಿಸುವ ಕಾರ್ಯಕ್ರಮ, ಯೋಜನೆಗಳ ಮೂಲಕ ಪ್ರತೀ ವರ್ಷ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ಬಾರಿ 2022ರಲ್ಲಿ ‘ಸುಸ್ಥಿರ ನಾಳೆಗಾಗಿ ಇಂದು ಲಿಂಗ ಸಮಾನತೆ’ (Gender Equality Today for a Sustainable Tomorrow) ಎನ್ನುವ ಧ್ಯೇಯವಾಕ್ಯದೊಂದಗೆ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಸಂಚಿಹೊನ್ನಮ್ಮ ಮಹಿಳಾ ಮಂಡಳಿ. ಶ್ರೀಮತಿ ಬಿ. ಭಾರತಿ ಈಶ್ವರ್ ಕನ್ನಡ ಉಪನ್ಯಾಸಕರು ಬಾಳೆಹೊನ್ನೂರು. ಸಂಚಿಹೊನ್ನಮ್ಮ ಮಹಿಳಾ ಮಂಡಳಿ ಅಧ್ಯಕ್ಷರು ಕಮಲಾಕ್ಷಮ್ಮ. ನಝರತ್ ಶಾಲೆಯ ಪ್ರಿನ್ಸಿಪಾಲ್ ಸಿಸ್ಟರ್ ಲೋಬೊ. ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷರು ಹಾಗೂ ಬಣಕಲ್ ಕ್ರೈಸ್ತ ಅಭಿವೃದ್ಧಿ ಸಂಘದ ಅಧ್ಯಕ್ಷರು ಹರ್ಷ ಮೆಲ್ವಿನ್ ಲಸ್ರಾದೋ. ಶ್ರೀಮತಿ ಸೀತಮ್ಮ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮೂಡಿಗೆರೆ, ಭಾಗವಸಿದ್ದರು.
