:ಇಂದು ಜೆಸಿಐ ಬಣಕಲ್ ವಿಸ್ಮಯ ಸಂಸ್ಥೆಯ ವತಿಯಿಂದ ದುರ್ಗದಹಳ್ಳಿ ಹೋಂಸ್ಟೇ ಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು.
ಸಂಸ್ಥೆಯ ಲೇಡಿ ಜೆಸಿ ಅಧ್ಯಕ್ಷರಾದ ಅಶ್ವಿನಿ ಶರತ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮವನ್ನು ಅತಿಥಿಗಳಾದ ಚೂಡಾಮಣಿ ರವಿ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮೂಡಿಗೆರೆ ತಾಲೂಕಿನ ಅತ್ಯಂತ ದುರ್ಗಮ ಪ್ರದೇಶವಾದ ಹಾಗೂ 2019 ರಲ್ಲಿ ಸಂಭವಿಸಿದ ಭೀಕರ ಪ್ರಕೃತಿ ವಿಕೋಪಕ್ಕೆ ತುತ್ತಾದ ಆಲೇಖಾನ್ ಎಂಬ ಊರಿನಲ್ಲಿ ಕಳೆದ 22 ವರ್ಷಗಳಿಂದ ಸಮೀಪದ 15 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಲ್ನಡಿಗೆಯಲ್ಲೇ ನಡೆದು ಆಶಾ ಕಾರ್ಯಕರ್ತೆ ಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಪವಿತ್ರ ಗೋಪಾಲ್ ಅವರನ್ನು ಸಂಸ್ಥೆಯ ವತಿಯಿಂದ ಗೌರವ ನೀಡಿ ಸನ್ಮಾನಿಸಲಾಯಿತು.
ಸಂಸ್ಥೆಯ ಜೆಸಿ ಅಧ್ಯಕ್ಷರಾದ ಶರತ್ ಫಲ್ಗುಣಿ ಹಾಗೂ ಸಂಸ್ಥೆಯ ಸರ್ವ ಸದಸ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮಕ್ಕೂ ಮುನ್ನ ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ನೀಡಲಾಯಿತು ಕಾರ್ಯಕ್ರಮದಲ್ಲಿ ಮಧುರ ಕವೀಶ್. ನಾಟ್ಯ ರಂಜಿತ್. ಶಬರಿ ಶ್ರೀನಾಥ್. ಮೊದಲಾದವರು ಉಪಸ್ಥಿತರಿದ್ದರು.
