ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಬಣಕಲ್ ನಲ್ಲಿ ಹಿಂದು ಮುಸ್ಲಿಂ ಬಾಂಧವರಿಂದ ಶ್ರದ್ದಾಂಜಲಿ

ಬಣಕಲ್ :ರಾಜಸ್ತಾನದ ಉದಯಪುರದಲ್ಲಿ ಹಾಡುಹಗಲೇ ಟೈಲರ್ ಕನ್ಹಯ್ಯಾ ಲಾಲ್ ಭೀಕರ ಹತ್ಯೆಯನ್ನು ವಿರೋಧಿಸಿ ಇಂದು ಶುಕ್ರವಾರ ಬಣಕಲ್ ನಲ್ಲಿಪ್ರತಿಭಟನೆ ನಡೆಸಲಾಯಿತು ಬಣಕಲ್ ಸಮುದಾಯ ಭವನದಲ್ಲಿ ಕನ್ನಯ ಲಾಲ್ ಫೋಟೋ ಇಟ್ಟು ಮೌನಾಚರಣೆ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು
ಮಳೆಯ ನಡುವೆಯೂ ನೂರಾರು ಸಂಖ್ಯೆಯಲ್ಲಿ ಸೇರಿದ ಹಿಂದು ಮುಸ್ಲಿಂ ಬಾಂದವರು ಹಂತಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು..ಸಭೆಯಲ್ಲಿ ಫ್ರೆಂಡ್ಸ್ ಕ್ಲಬ್ ಸದಸ್ಯರು,ಗ್ರಾಮ ಪಂಚಾಯಿತಿ ಸದಸ್ಯರು, ಬಣಕಲ್ ನಾಗರಿಕರು, ಆಟೋ ಚಾಲಕರು ಭಾಗವಹಿಸಿದ್ದರು