ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ವತಿಯಿಂದ ನಡೆದ ಬಣಕಲ್ ಬಂದ್ ಸಂಪೂರ್ಣ ಯಶಸ್ವಿ

ಬಣಕಲ್: ರಾಜಸ್ಥಾನದ ಉದಯಪುರದಲ್ಲಿ ನಡೆದ ಅಮಾಯಕ ಹಿಂದು ಟೈಲರ್ ಕನ್ನಯ್ಯ ಲಾಲ್ ಅವರನ್ನು ಅಮಾನುಷವಾಗಿ ಕೊಲೆಗೈದ ಆರೋಪಿಗಳನ್ನು ಗಲ್ಲಿಗೆ ಏರಿಸಬೇಕೆಂದು ಆಗ್ರಹಿಸಿ ಬಣಕಲ್ ಟೈಲರ್ ಅಸೋಶಿಯೇಷನ್ ವತಿಯಿಂದ ಬಣಕಲ್ ನಲ್ಲಿ ಪ್ರತಿಭಟನೆ ನಡೆಸಿದರು.ಹತ್ಯೆಯನ್ನು ತೀವ್ರವಾಗಿ ಖಂಡಿಸಿ ಆರೋಪಿಗಳ ವಿರುದ್ದ ದಿಕ್ಕಾರ ಕೂಗಿದರು.
ಬಣಕಲ್ ಸಮುದಾಯ ಭವನದಲ್ಲಿ ಸಭೆ ನಡೆಸಿದರು ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಉಪ ಸಭಾಪತಿ ಎಂ ಕೆ ಪ್ರಾಣೇಶ್ ಯಾವುದೇ ತಪ್ಪು‌ ಮಾಡದ ಕನ್ನಯ್ಯಲಾಲ್ ತಮ್ಮ ಪಾಡಿಗೆ ತಾವು ಟೈಲರಿಂಗ್ ಕೆಲಸ ಮಾಡುತ್ತಿದ್ದರು. ಗ್ರಾಹಕರಾಗಿ ಬಂದ ಹಂತಕರು ಬಳಿಕ ಕನ್ನಯ್ಯಲಾಲ್ ಅವರ ಕುತ್ತಿಗೆಯನ್ನು ಸೀಳಿ ಅಮಾನುಷವಾಗಿ ಹತ್ಯೆ ಗೈದಿದ್ದಾರೆ.‌

ಬಳಿಕ ವಿಡಿಯೋ ಮಾಡಿ ಸಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟು ವಿಕೃತಿ ಮೆರೆದಿದ್ದಾರೆ. ಇದೇ ರೀತಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸಹ ಇದೇ ಕತ್ತಿಯಿಂದ ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಿರುವುದು ಇಡೀ ದೇಶವೇ ಖಂಡಿಸುತ್ತದೆ ಎಂದರು
ಕೊಲೆ ಮಾಡಿದ ಮೊಹಮದ್  ಗೌಸ್ ಹಾಗೂ ಮೊಹಮದ್ ರಿಯಾಜ್ ಅವರ ವಿರುದ್ದ ಬೇಗ ತನಿಖೆ ನಡೆಸಿ ಗಲ್ಲುಶಿಕ್ಷೆ ವಿಧಿಸಿ ಅವರ ಶವವನ್ನು ಬಹಿರಂಗವಾಗಿ ಸುಟ್ಟು ಹಾಕಬೇಕೆಂದು ಆಗ್ರಹಿಸಿದರು
ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ರಘು ಜೆ,ಎಸ್, ಮಾತನಾಡಿ ದೇಶದಲ್ಲಿ ಹಿಂದೂ ಯುವಕರ ಹತ್ಯೆಯಾದರೆ ಕಾಂಗ್ರೆಸ್ ತುಟಿ ಬಿಚ್ಚಲ್ಲ. ಕಾಂಗ್ರೆಸ್ ಬೆಂಬಲಿತ ಬುದ್ಧಿ ಜೀವಿಗಳು ದೇಶಕ್ಕೆ ಮಾರಕವಾಗಿದ್ದಾರೆ. ಭಾವೈಕ್ಯ ಮನೋಭಾವದಿಂದ ಇರುವವರಿಗೆ ಸಹಿಷ್ಣುತೆ ಪಾಠ ಹೇಳುತ್ತಾರೆ, ಕ್ರೂರತೆ, ಮತಾಂಧತೆ ಬೆಳೆಸಿಕೊಂಡವರಿಗೆ ಏನೂ ಹೇಳುವುದಿಲ್ಲ’ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ ಶಾಸಕ ಎಂಪಿ ಕುಮಾರಸ್ವಾಮಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅವಿನಾಶ್, ಟೈಲರ್ ಸಂಘದ ಅಧ್ಯಕ್ಷರಾದ ಪುಟ್ಟಸ್ವಾಮಿ ಇದ್ದರು ಬಂದ್ ಕರೆಗೆ ಬಣಕಲ್ ಹಿಂದೂ ಸಂಘಟನೆ ಕಾರ್ಯಕರ್ತರು, ಆಟೋ ಚಾಲಕರ ಸಂಘಟನೆ, ಗ್ಯಾರೇಜ್ ಸಂಘಟನೆ,ವರ್ತಕರ ಸಂಘಟನೆ ಬೆಂಬಲ ಸೂಚಿಸಿದರು.