ಚಿಕ್ಕಮಗಳೂರು, :
ಕಳೆದ ಐದು ತಿಂಗಳಿನಿಂದ ಜಿಲ್ಲೆಗೆ ಉಸ್ತುವಾರಿ ಸಚಿವರಿಲ್ಲದೆ ಪ್ರವಾಹ ಪರಿಸ್ಥಿತಿ ಉಂಟಾದರೂ ಮಲೆನಾಡಿಗರ ಗೋಳು ಕೇಳುವವರಿರಲಿಲ್ಲ. ಕೆಲವು ಜನಪ್ರತಿನಿಧಿಗಳು ಬಂದರೂ ಕಲವೇ ಸ್ಥಳಗಳಿಗೆ ಭೇಟಿ ನೀಡಿ ಹೊರಡುತ್ತಿದ್ದರು, ಇನ್ನೂ ವಾರದ ಹಿಂದೆ ಹೊಳೆಯಲ್ಲಿ ಕೊಚ್ಚಿ ಹೋದ ಹೊಸಪೇಟೆ ಬಾಲಕಿ ಮನೆಗೆ ಯಾರೊಬ್ಬರು ತೆರಳದೇ ಇದ್ದದ್ದು, ಜನರ ಆಕ್ರೋಶಕ್ಕೆ ಕಾರಣವಾಗಿತ್ತು.
ಜಿಲ್ಲಾ ಉಸ್ತುವಾರಿಯಾಗಿ ನೇಮಕವಾಗುತ್ತಿದ್ದಂತೆ ಸಚಿವ ಬೈರತಿ ಬಸವರಾಜು ಚಿಕ್ಕಮಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಭೇಟಿ ನೀಡಿದರು. ಜಿಲ್ಲೆಯಲ್ಲಿ ಹಲವು ಗ್ರಾಮಗಳಿಗೆ ಭೇಟಿ ನೀಡಿದರು ಮೂಡಿಗೆರೆ ತಾಲೂಕ್ಕಿನ ಹೆಬ್ರಿಗೆ ಕೊಟ್ಟಿಗೆಹಾರದ ಅಜಾದ್ ನಗರ ಹೀಗೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಕುಟುಂಬಗಳಿಗೆ ನೆರವು ನೀಡಿದರು
ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಅಜಾದ್ ನಗರದಲ್ಲಿ ಮನೆಯೊಂದು ಕುಸಿದ್ದು, ಬಡಕುಟುಂಬವೊಂದು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದರು . ಅಜಾದ್ ನಗದ ಲೀಲಾ ಎಂಬುವವರು ತಮ್ಮ ನಾಲ್ಕು ಮಕ್ಕಳೊಂದಿಗೆ ಬಿರುಕುಬಿಟ್ಟಿರುವ ಮನೆಯ ಪಕ್ಕದಲ್ಲಿ ಟಾರ್ಪಲ್ ಕಟ್ಟಿಕೊಂಡು ವಾಸ ಮಾಡುತ್ತಿದ್ದರು l. ಮಳೆ ಹೀಗೆ ಮುಂದುವರಿದರೆ ಆಶ್ರಯ ಕಳೆದುಕೊಳ್ಳುವ ಭೀತಿಯಲ್ಲೇ ಕುಟುಂಬ ಜೀವನ ಸಾಗಿಸುತ್ತಿದ್ದರು .
ಇನ್ನು ಶನಿವಾರವಷ್ಟೇ ಜಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದ ಬೈರತಿ ಬಸವರಾಜು ಟಾರ್ಪಲ್ ಕಟ್ಟಿಕೊಂಡು ವಾಸಿಸುತ್ತಿರುವ ಲೀಲಾ ಮನೆಗೆ ಭೇಟಿ ನೀಡಿ, ಅವರ ಕಣ್ಣೀರಿನ ಕಥೆ ಕೇಳಿ ಸ್ಥಳದಲ್ಲೇ 50 ಸಾವಿರ ರೂಪಾಯಿ ನೆರವು ನೀಡಿದರು
