ಬಣಕಲ್ :ತಾಲೂಕಿನ ಹೆಗ್ಗುಡ್ಲು ಗ್ರಾಮಕ್ಕೆ ಸಾರಿಗೆ ಸಂಸ್ಥೆ ಬಸ್ ಸಂಚಾರವನ್ನು ಸೋಮವಾರದಿಂದ ಪ್ರಾರಂಭಿಸಲಾಯಿತು. ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿರವರು ಬಸ್ ಸೇವೆಗೆ ಚಾಲನೆ ನೀಡಿ ಶುಭ ಹಾರೈಸಿದರು.
ಬಸ್ ಸೌಕರ್ಯ ಕಲ್ಪಿಸಲು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಗ್ರಾಮಸ್ಥರು ಅನೇಕ ವರ್ಷಗಳಿಂದ ಹೋರಾಟ ಮಾಡಿದ್ದರು. ಸಾರಿಗೆ ಸೌಲಭ್ಯವಿಲ್ಲದೇ ಇರುವುದರಿಂದ ಅನೇಕ ತೊಂದರೆ ಪಡುವಂತಾಗಿತ್ತು. ಗ್ರಾಮಸ್ಥರ ಹೋರಾಟದ ಫಲವೇ ಗ್ರಾಮಕ್ಕೆ ಶಾಸಕರು ಹಾಗೂ ಅಧಿಕಾರಿಗಳು ಬಸ್ ಸೌಲಭ್ಯ ಕಲ್ಪಿಸಿದ್ದಾರೆ ಎಂದು ಹೆಗ್ಗುಡ್ಲು ಗ್ರಾಮಸ್ಥ ಕಿರಣ್ ರಾಜ್ ಹೇಳಿದ್ದಾರೆ.
ಹೆಗ್ಗುಡ್ಲು ಗ್ರಾಮಕ್ಕೆ ನೂತನ ಸಾರಿಗೆ ಬಸ್ ಸಂಚಾರಕ್ಕೆ ಅನುಕೂಲ ಕಲ್ಪಿಸಿದ್ದರಿಂದ ಸೇವೆಗೆ ನಿಯೋಜನೆಗೊಂಡ ಚಾಲಕ ಮತ್ತು ಕಂಡಕ್ಟರ್ ಶಾಸಕರಾದ ಎಂ.ಪಿ. ಕುಮಾರಸ್ವಾಮಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲೀಲಾವತಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಇರ್ಫಾನ್, ಬಿಜೆಪಿ ಮುಖಂಡರಾದ ಭರತ್. ವಿಕ್ರಂ. ಗ್ರಾಮಸ್ಥರಾದ ನಾಗರಾಜ್ ಅಧಿಕಾರಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಗ್ರಾಮಸ್ಥರಾದ.ರಾಮಚಂದ್ರ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸತೀಶ್ ಗ್ರಾಮ ಪಂಚಾಯಿತಿ ಸದಸ್ಯರಾದ ತಾರಾನಾಥ್ ಬಿಜೆಪಿ ಮುಖಂಡರಾದ ಪರೀಕ್ಷಿತ್. ರಕ್ಷಿತ್.ಹೆಗ್ಗುಡ್ಲು ಬಸನಿ ಗ್ರಾಮಸ್ಥರು ಈ ಸಂದರ್ಭದಲ್ಲಿ ಇದ್ದರು
