ಮತ್ತಿಕಟ್ಟೆಯಲ್ಲಿ ಪ್ರತಿಷ್ಠಾಪಿಸಿದ ಗಣಪತಿ ವಿಸರ್ಜನೆ

ಮತ್ತಿಕಟ್ಟೆ ಗ್ರಾಮದ ಸಮುದಾಯ ಭವನದಲ್ಲಿ ಪ್ರತಿಷ್ಠಾಪನೆ ಮಾಡಿದ ಗಣಪತಿ ವಿಗ್ರಹವನ್ನು ಶುಕ್ರವಾರ ವಿಸರ್ಜಿಸಲಾಯಿತು. ಗ್ರಾಮದ ಮುಖಂಡರ ಸಮ್ಮುಖದಲ್ಲಿ ಯುವಕರು, ಮಹಿಳೆಯರು ಸೇರಿದಂತೆ ಎಲ್ಲಾ ವಿದ್ಯಾರ್ಥಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರತಿಷ್ಠಾಪನೆ ಮಾಡಲಾಗಿದ್ದ ಗಣಪತಿಯನ್ನು ಟ್ರ್ಯಾಕ್ಟರ್‌ನಲ್ಲಿ ಕುಳ್ಳರಿಸಿ ವಿವಿದ ಹೂಗಳಿಂದ ಶೃಂಗರಿಸಿ, ಬಣ್ಣಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಿ, ಅರ್ಚಕ ಪೂಜಾ ಕಾರ್ಯಕ್ರಮ ನೆರವೇರಿಸಿದರು.

ಗ್ರಾಮದ ಬೀದಿ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಪ್ರಮುಖ ಗ್ರಾಮದ ಯುವಕರು ಕುಣಿದು ಕುಪ್ಪಳಿಸಿದರು. ನಂತರ ಗ್ರಾಮದ ಹೊರ ವಲಯದಲ್ಲಿರುವ ಬಣಕಲ್ ನ ಹೇಮಾವತಿ ನದಿಯಲ್ಲಿ ವಿಸರ್ಜಿಸಿದರು. ಬಂದಂತಹ ಎಲ್ಲಾ ಭಕ್ತಾಧಿಗಳಿಗೂ ಪ್ರಸಾದ ವಿನಿಯೋಗಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮದ ಸತೀಶ್ .ಅಶೋಕ್. ಕಿಶೋರ್ .ಆಕಾಶ್ .ರಾಜೇಶ್ ರಾಜೇಶ್. ಶಶಿ. ಸುಂದರ್. ಹರೀಶ್. ಭರತ್. ಶರತ್. ಚಂದ್ರಶೇಖರ್. ವಿಶ್ವನಾಥ್. ಮಹಿಳೆಯರು ಗ್ರಾಮಸ್ಥರು ಈ ಸಂದರ್ಭದಲ್ಲಿ ಇದ್ದರು