ಬಣಕಲ್ ರಿವರ್ ವ್ಯೂ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ


ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆ ಅಂಗವಾಗಿ ಸಂಭ್ರಮಾಚರಣೆ ಮಾಡಲಾಯಿತು
ಶಿಕ್ಷಕರ ದಿನಾಚರಣೆಯನ್ನು ಪ್ರತಿ ವರ್ಷ ಸೆಪ್ಟೆಂಬರ್ 5 ರಂದು ಆಚರಣೆ ಮಾಡಲಾಗುತ್ತದೆ. ಅದು ಭಾರತೀಯ ತತ್ವಶಾಸ್ತ್ರಜ್ಞರು ಮತ್ತು ರಾಷ್ಟ್ರದ ಎರಡನೇ ರಾಷ್ಟ್ರಪತಿಯೂ ಆದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನದ ಸ್ಮರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತದೆ.
ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳು ವಿಶೇಷವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಮ್ಮ ಶಿಕ್ಷಕರಿಗೆ ನೆಚ್ಚಿನ ಹಾಡುಗಳನ್ನು ಹಾಡುವುದು ಶಿಕ್ಷಕರ ಬಗ್ಗೆ ಹಿತನುಡಿಗಳನ್ನು ವಿದ್ಯಾರ್ಥಿಗಳು ಹೇಳಿದರು. ಶಿಕ್ಷಕರಿಗೆ ಮಕ್ಕಳಿಂದ ವಿವಿಧ ಕ್ರೀಡಾ ಸ್ಪರ್ಧೆ ಗಳನ್ನು ಏರ್ಪಡಿಸಿದ್ದರು ವಿಜೇತರಾದ ಶಿಕ್ಷಕರಿಗೆ ಉಡುಗೊರೆ ನೀಡುವ ಚಟುವಟಿಕೆಗಳನ್ನು ಮಕ್ಕಳೇ ಮಾಡಿದರು. ಈ ಸಂದರ್ಭದಲ್ಲಿ ಶಾಲಾ ನಿರ್ದೇಶಕರು ಇಮ್ರಾನ್ ಮುಖ್ಯ ಶಿಕ್ಷಕಿ ರಾಧಾ ಕಾರ್ಯಪ್ಪರವರು ಉಪಸ್ಥಿತರಿದ್ದರು.