ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕಿಗೆ ಬಣಕಲ್ ಶ್ರಮಜೀವಿ ಆಟೋ ಚಾಲಕರ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ

ಬಣಕಲ್ :
ಬಸ್ಸಿಂದ ಬಿದ್ದು ಮೆದುಳು ನಿಷ್ಕ್ರೀಯತೆಗೊಳಗಾಗಿದ್ದ ಚಿಕ್ಕಮಗಳೂರಿನ ವಿದ್ಯಾರ್ಥಿನಿಯ ಅಂಗಾಂಗಗಳನ್ನು ಒಂಬತ್ತು ಜನರಿಗೆ ಜೀವದಾನ ನೀಡಿದ್ದರು. ಇದರೊಂದಿಗೆ ಕಾಫಿನಾಡಿನ ವಿದ್ಯಾರ್ಥಿನಿ ರಕ್ಷಿತಾ ಬಾಯಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು.
ಇಂದು ಬಣಕಲ್ ಶ್ರಮಜೀವಿ ಆಟೊ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ನಿನ್ನೆ ಅಂಗಾಂಗ ದಾನ ಮಾಡಿದ ವಿದ್ಯಾರ್ಥಿನಿ ರಕ್ಷಿತಾ ಬಾಯ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಮಯದಲ್ಲಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಹಾಜರಿದ್ದರು