ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಸಲ್ಲಿಸಿದ ಪ್ರಭಾಕರ್ ಭಿನ್ನಡಿ :ಮೂಡಿಗೆರೆ ವಿಧಾನ ಸಭಾ ಕ್ಷೇತ್ರ

ಬಣಕಲ್ :ಮೀಸಲು ವಿಧಾನಸಭಾ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ ಎಲ್ಲಾ ಪಕ್ಷಗಳು ತಯಾರಿಯನ್ನು ಆರಂಭಿಸಿ ಈಗಾಗಲೇ ಕಣಕ್ಕಿಳಿದಿದೆ. ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಈ ಬಾರಿ ಜಿದ್ದಾಜಿದ್ದಿನ ಚುನಾವಣಾ ಅಂಕಣ ನಿರ್ಮಾಣವಾಗಿದೆ. ಅದರಂತೆ ಮೂಡಿಗೆರೆ ಕ್ಷೇತ್ರದಲ್ಲೂ ಟಿಕೆಟ್ ಗಾಗಿ ತೀವ್ರ ಪೈಪೋಟಿಯಿದ್ದು ಒಂದೆಡೆ ನಯನಾ ಮೋಟಮ್ಮ, ನಾಗರತ್ನ, ಪ್ರಭಾಕರ್ ಭಿನ್ನಡಿ,ಕಾಂಗ್ರೆಸ್ ಆಕಾಂಕ್ಷಿಯಾಗಿ ಈಗಾಗಲೇ ಕ್ಷೇತ್ರದಲ್ಲಿ ಪ್ರವಾಸ ಆರಂಭಿಸಿದ್ದಾರೆ. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿರುವ ಪ್ರಭಾಕರ್ ಭಿನ್ನಡಿರವರು ಮೂಡಿಗೆರೆ ಮೀಸಲು ಕ್ಷೇತ್ರದ ಆಕಾಂಕ್ಷಿಯಾಗಿ, ಪಕ್ಷದಿಂದ ಟಿಕೆಟ್ ಪಡೆಯಲು ಅರ್ಜಿಸಲ್ಲಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲಾ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. 5 ಸಾವಿರ ರೂಪಾಯಿ ಅರ್ಜಿಶುಲ್ಕ ಮತ್ತು ಸಾಮಾನ್ಯ ಕ್ಷೇತ್ರಗಳಿಗೆ 2 ಲಕ್ಷ ಠೇವಣಿ ಹಾಗೂ ಮೀಸಲು ಕ್ಷೇತ್ರಗಳಿಗೆ ರೂ. 1 ಲಕ್ಷ ಠೇವಣಿಯೊಂದಿಗೆ ಅರ್ಜಿಯನ್ನು ಅಭ್ಯರ್ಥಿಗಳಿಂದ ಆಹ್ವಾನಿಸಿದೆ.
ಮೂಡಿಗೆರೆ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಸಲುವಾಗಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಪ್ರಭಾಕರ್ ಭಿನ್ನಡಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. 5 ಸಾವಿರ ರೂಪಾಯಿ ಅರ್ಜಿ ಶುಲ್ಕ ಹಾಗೂ ರೂ. 1 ಲಕ್ಷ ಠೇವಣಿಯೊಂದಿಗೆ ಅರ್ಜಿ ಸಲ್ಲಿಸಿರುವ ಪ್ರಭಾಕರ್ ಈ ಬಾರಿ ಪಕ್ಷದಿಂದ ಟಿಕೆಟ್ ಪಡೆಯುವ ನಿರೀಕ್ಷೆ ಹೊಂದಿದ್ದಾರೆ.
ಕಾಂಗ್ರೆಸ್ ನ ಟಿಕೆಟ್ ಆಕಾಂಕ್ಷಿಯಾಗಿ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿರುವ ಇವರು, ಟಿಕೆಟ್ ಪಡೆಯುವ ಹಂಬಲದಲ್ಲಿದ್ದಾರೆ.ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಾಗಿ ಗುರುತಿಸಿಕೊಂಡಿರುವ ಅವರು ತನ್ನ ಕಾರ್ಯ ವೈಖರಿಯಿಂದ ಜನ ಮನ್ನಣೆ ಪಡೆದಿದ್ದಾರೆ.