ಮೂಡಿಗೆರೆ ಮೀಸಲು ಕ್ಷೇತ್ರ ಪ್ರಭಾಕರ್ ಭಿನ್ನಡಿ ಕಾಂಗ್ರೆಸ್ ಪ್ರಬಲ ಟಿಕೆಟ್ ಆಕಾಂಕ್ಷಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಸಲುವಾಗಿ ಎಲ್ಲಾ ಪಕ್ಷಗಳು ತಯಾರಿಯನ್ನು ಆರಂಭಿಸಿ ಈಗಾಗಲೇ ಕಣಕ್ಕಿಳಿದಿದೆ ಅದರಂತೆ ಮೂಡಿಗೆರೆ ಕ್ಷೇತ್ರದಲ್ಲೂ ಟಿಕೆಟ್ ಕಾಗಿ ತೀವ್ರ ಪೈಪೋಟಿ ಇದ್ದು ಒಂದೆಡೆ ಪ್ರಭಾಕರ್ ಭಿನ್ನಡಿ ಕಾಂಗ್ರೆಸ್ ನ ಪ್ರಬಲ ಆಕಾಂಕ್ಷಿಯಾಗಿ ಹೊರಹೋಮ್ಮುತಿದ್ದಾರೆ. ಮೀಸಲು ಕ್ಷೇತ್ರವಾಗಿರುವ ಮೂಡಿಗೆರೆಯಲ್ಲಿ ಪರಿಶಿಷ್ಟರ ಸಂಖ್ಯೆ ಹೆಚ್ಚಿದ್ದರೂ, ಒಕ್ಕಲಿಗರ ಬೆಂಬಲ ಕೂಡ ನಿರ್ಣಾಯಕ. ಇಲ್ಲಿ ಬಿಜೆಪಿ ಮತ್ತು ಜೆಡಿಎಸ್‌ಗಿಂತ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿದೊಡ್ಡದಿದೆ. ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ನಯನ ಮೋಟಮ್ಮ, ನಾಗರತ್ನ, ಹೂವಪ್ಪ, ಪ್ರಭಾಕರ್‌, ಅವರ ಹೆಸರುಗಳು ಕಾಂಗ್ರೆಸ್‌ನಿಂದ ಕೇಳಿ ಬರುತ್ತಿವೆ. ಪ್ರಭಾಕರ್ ಭಿನ್ನಡಿ ಅವರು ತಾಲ್ಲೂಕಿನಲ್ಲಿ ಯಾರ ನಿಷ್ಟುರವನ್ನು ಕಟ್ಟಿಕೊಳ್ಳದೆ ಪ್ರಾಮಾಣಿಕವಾಗಿ ಪಕ್ಷ ನಿಷ್ಠೆ ತೋರಿಸಿದ್ದಾರೆ ಅವರಿಗೆ ಎಲ್ಲಾ ವರ್ಗದ ಜನ ಬೆಂಬಲ ಇದೆ ತನಗೆ ಪಕ್ಷ ಟಿಕೆಟ್ ನೀಡಿದರೆ ಪಕ್ಷ ವನ್ನು ಗೆಲುವಿನ ದಡ ಸೇರಿಸುತ್ತೇನೆ ಎಂಬ ಆತ್ಮ ವಿಶ್ವಾಸ ಅವರಲ್ಲಿ ಇದೆ.

ಬಿಜೆಪಿಯಿಂದ ಶಾಸಕ ಎಂ.ಪಿ.ಕುಮಾರಸ್ವಾಮಿಯವರು ಸಹಜವಾಗಿ ಟಿಕೆಟ್‌ ಆಕಾಂಕ್ಷಿ. ಜೊತೆಗೆ, ವಿಜಯಕುಮಾರ್‌, ದೀಪಕ್‌ ದೊಡ್ಡಯ್ಯ, ಡಾ.ಶಿವಪ್ರಸಾದ್‌ ಕೂಡ ಬಿಜೆಪಿ ಟಿಕೆಟ್‌ಗೆ ಯತ್ನ ನಡೆಸಿದ್ದಾರೆ. ಆಸ್ಪ್ರೇಲಿಯನ್‌ ಫೆಡರಲ್‌ ಸರ್ಕಾರದ ಹಿರಿಯ ವಿಶ್ಲೇಷಕರಾಗಿ ಕೆಲಸ ಮಾಡಿರುವ ವಿಜಯಕುಮಾರ್‌ಗೆ ಬಿಜೆಪಿಯ ಹಿರಿಯ ನಾಯಕರ ಶ್ರೀ ರಕ್ಷೆ ಇದೆ. ಹೀಗಾಗಿ ಟಿಕೆಟ್‌ ಹಂಚಿಕೆ ಕುತೂಹಲ ಮೂಡಿಸಿದೆ. ಜೆಡಿಎಸ್‌ನಲ್ಲಿ ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಅಶೋಕ್‌, ರುದ್ರೇಶ್‌ ಕಾಹಳೆ ಟಿಕೆಟ್‌ಗೆ ಯತ್ನ ನಡೆಸಿದ್ದಾರೆ. ಈ ಪೈಕಿ, ನಿಂಗಯ್ಯ ಅವರು ಅನುಭವಿ ರಾಜಕಾರಣಿ ಆಗಿರುವುದರಿಂದ ಪಕ್ಷ ಅವರಿಗೆ ಆದ್ಯತೆ ನೀಡಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ ಮೂಡಿಗೆರೆ ರಾಜಕೀಯ ರಣರಂಗದಲ್ಲಿ ಯಾರಿಗೆ ಟಿಕೆಟ್ ಎಂಬ ಉತ್ತರ ಕೆಲವೇ ದಿನಗಳಲ್ಲಿ ದೊರೆಯುತ್ತದೆ.