ಸ್ವಂತ ಕಾರು ಹೊಂದಿದ್ದು, ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಕರ್ನಾಟಕ ರಾಜ್ಯ ಸರ್ಕಾರ ಶಾಕ್ ನೀಡಿದೆ. ವೈಟ್ ಬೋರ್ಡ್ ಕಾರು ಹೊಂದಿರುವವರಿಗೆ ರೇಷನ್ ಕಾರ್ಡ್ ಇಲ್ಲ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆದ್ರೆ ದುಡಿಯುವ ಉದ್ದೇಶದಿಂದ ಎಲ್ಲೋ ಬೋರ್ಡ್ ಕಾರು ಹೊಂದಿರುವವರ ರೇಷನ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಕೂಡ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಉಚಿತ ಯೋಜನೆಗಳು ಪಡೆಯುವುದಕ್ಕೆ ಬಹುತೇಕ ಯೋಜನೆಗಳಿಗೆ ಬಿಪಿಎಲ್ ಕಾರ್ಡ್ ಬೇಕೆ ಬೇಕು. ಕಾಂಗ್ರೆಸ್ ಪಕ್ಷದ ಉಚಿತ ಯೋಜನೆಗಳ ಫಲಾನುಭವಿಗಳು ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕೂಡ ಲಿಂಕ್ ಆಗಿರಬೇಕು. ಗೃಹ ಲಕ್ಷ್ಮೀ ಯೋಜನೆಗೂ ಸಹ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕುಸರ್ಕಾರದ ಗೃಹಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತಿದ್ದಂತೆ ಹೊಸ ರೇಷನ್ ಕಾರ್ಡ್ಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗಿದೆ. ಆದ್ರೆ ಹೊಸ ಮಾರ್ಗಸೂಚಿ ಪ್ರಕಾರ ಸ್ವಂತ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದು ಆಗಲಿದೆ ಎಂದು ಸುದ್ದಿಯಾಗಿದೆ.
ಸ್ವಂತ ಕಾರು ಹೊಂದಿದ್ದು ಬಿಪಿಎಲ್ ಕಾರ್ಡ್ ಪಡೆದಿದ್ದವರಿಗೆ ಸರ್ಕಾರ ಶಾಕ್ ನೀಡಿದ್ದು, ವೈಟ್ ಬೋರ್ಡ್ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ.ಈ ಕುರಿತು ಈಗಾಗಲೇ ಸುದ್ದಿಗೋಷ್ಠಿಯಲ್ಲಿ ತಿಳಿಸಿರುವ ಸಚಿವರು ವೈಟ್ ಬೋರ್ಡ್ ಕಾರು ಇರುವವರಿಗೆ ಬಿಪಿಎಲ್ ಕಾರ್ಡ್ ಇಲ್ಲ. ಯಲ್ಲೋ ಬೋರ್ಡ್ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ಇರಲಿದೆ. ದುಡಿಯುವ ಉದ್ದೇಶದಿಂದ ಕಾರು ಖರೀದಿಸಿದವರ ಬಿಪಿಎಲ್ ಕಾರ್ಡ್ ರದ್ದು ಮಾಡಲ್ಲ. ಶೀಘ್ರದಲ್ಲೇ ಈ ಬಗ್ಗೆ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಅನ್ನಭಾಗ್ಯ ಯೋಜನೆಗಾಗಿ ರಾಜ್ಯಕ್ಕೆ ಆಂಧ್ರ ಮತ್ತು ತೆಲಂಗಾಣ ಎರಡು ರಾಜ್ಯಗಳು ಅಕ್ಕಿ ಪೂರೈಸಲು ಮುಂದಾಗಿವೆ. ಹೀಗಾಗಿ ಸೆಪ್ಟಂಬರ್ ನಿಂದ ಹಣದ ಬದಲು 10 ಕೆ.ಜಿ ಅಕ್ಕಿ ನೀಡುವ ಚಿಂತನೆ ನಡೆಸಲಾಗಿದೆ. ಆಹಾರ ನಿಗಮದ ದರದಲ್ಲಿ ಅಕ್ಕಿ ನೀಡುವಂತೆ ಮನವಿ ಮಾಡಿದ್ದೇವೆ 1 ವಾರದಲ್ಲಿ ಅಲ್ಲಿನ ಅಧಿಕಾರಿಗಳು ನಿರ್ಧರಿಸುವ ಸಾಧ್ಯತೆ ಇದೆ ಎಂದು ತಿಳಿಸಿದರು.