ಸೌಜನ್ಯ ಅವರಿಗೆ ನ್ಯಾಯ ಕೋರಿ ಕೆ.ಆರ್.ಎಸ್ ಪಕ್ಷದ ವತಿಯಿಂದ ಇಂದು ಬಣಕಲ್ ನಲ್ಲಿ ಪಾದಯಾತ್ರೆ

ಬಣಕಲ್ :ಧರ್ಮಸ್ಥಳದ ಹತ್ತಿರ ಸೌಜನ್ಯ ಎಂಬ ವಿದ್ಯಾರ್ಥಿನಿಯ ಮೇಲೆ ಬರ್ಬರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಆಗಸ್ಟ್ 26ರಂದು ಬೆಳ್ತಂಗಡಿಯಿಂದ ಬೆಂಗಳೂರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.ಇಂದು ಸಂಜೆ ಬಣಕಲ್ ಗೆ ಬಂದು ತಲುಪಿದ ಪಾದಯಾತ್ರೆಯು ಬಣಕಲ್ ನಲ್ಲಿ ಜನರನ್ನು ಉದ್ದೇಶಿಸಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಎಸ್.ಎಚ್. ಲಿಂಗೇಗೌಡ ಅವರು ಮಾತನಾಡಿದರು. ಸೌಜನ್ಯಳ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಹಿಂದಿನ ತನಿಖೆ ಸಂಪೂರ್ಣ ವಿಫಲವಾಗಿದೆ. ಹಾಗಾಗಿ ಆ ಕುರಿತು ಮರು ತನಿಖೆ ಕೈಗೊಂಡು ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನಿನ ಅಡಿ ಶಿಕ್ಷೆ ವಿಧಿಸಬೇಕು. ಹಿಂದಿನ ತನಿಖೆಯಲ್ಲಿ ಲೋಪ ಎಸಗಿರುವ ತನಿಖಾಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಬೇಕು. ಸಾಕ್ಷಿ ನಾಶಪಡಿಸಿದ ಕುರಿತು ಹಿಂದಿರುವ ಕೈವಾಡವನ್ನು ಪತ್ತೆ ಹಚ್ಚಬೇಕು ಎಂದು ಅವರು ಒತ್ತಾಯಿಸಿದರು.ನಂತರ ಬಣಕಲ್ ನಿಂದ ಘೋಷಣೆಗಳನ್ನು ಕೂಗುತ್ತ ಪಾದಯಾತ್ರೆ ಮೂಲಕ ಚರ್ಚ್ ಹಾಲ್ ವರೆಗೆ ಹೊರಟರು. ಇಂದು ಬಣಕಲ್ ಚರ್ಚ್ ಹಾಲ್ ನಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

✍️ವರದಿ :ಸೂರಿ ಬಣಕಲ್