ಚಾರ್ಮಾಡಿ ಘಾಟಿಯಲ್ಲಿ 100 ಅಡಿ ಪ್ರಪಾತಕ್ಕೆ ಬಿದ್ದ ಲಾರಿ

ಬಣಕಲ್ :ದಟ್ಟ ಮಂಜು ಹಾಗೂ ಮಳೆಯಿಂದ ದಾರಿ ಕಾಣದೆ ಪಲ್ಟಿಯಾಗಿದೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ಘಟನೆನಡೆದಿದೆ.ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಾರಿ ಪಲ್ಟಿಯಾಗುತ್ತಿದ್ದಂತೆ 100 ಅಡಿ ಪ್ರಪಾತದಲ್ಲಿ ಮರಕ್ಕೆ ಸಿಕ್ಕಿಕೊಂಡಿತ್ತು ಪ್ರಪಾತದಲ್ಲಿ ಇಬ್ಬರ ಜೀವ ಉಳಿಸಿತು ಮರ.

ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲಿ ಸಾಗಿಸುತ್ತಿದ್ದ ಲಾರಿ ಎಂದು ತಿಳಿದು ಬಂದಿದೆ.ಸ್ಥಳಿಯರಿಂದ ಲಾರಿ ಚಾಲಕ-ಕ್ಲೀನರ್ ರಕ್ಷಣೆ ಮಾಡಿದ್ದಾರೆ.ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿನೀಡಿ , ಪರಿಶೀಲನೆ ನಡೆಸಿದ್ದಾರೆ.