ಬಣಕಲ್: ಮನೆಯೊಂದರ ಬೀಗ ಮುರಿದು ಹಾಡು ಹಗಲೇ ಒಳನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಕಳವು ನಡೆಸಿ ಪರಾರಿಯಾದ ಘಟನೆ ಇಂದು ನಗರದ ಹೊರವಲಯದ ಗುಡ್ಡೆಟ್ಟಿ ಎಂಬಲ್ಲಿ ನಡೆದಿದೆ.
ಗುಡ್ಡೆಟಿ ಗ್ರಾಮದ ಗಂಗಾಧರ್ ಎಂಬವರ ಮನೆಯಿಂದ ಕಳ್ಳತನ ನಡೆದಿದೆ. ಬುಧವಾರ ಬೆಳಿಗ್ಗೆ ಮನೆಮಂದಿ ಮನೆಗೆ ಬೀಗ ಹಾಕಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು. ಸಂಜೆ ವೇಳೆಗೆ ಹಿಂತಿರುಗಿ ಬಂದಾಗ ಮನೆಯ ಹಿಂಬಾಗಿಲಿನ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ.ಈ ಬಗ್ಗೆ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ವರದಿ :ಸೂರಿ ಬಣಕಲ್