ಜನವರಿ 22ರಂದು ರಾಮ ಮಂದಿರ ಉದ್ಘಾಟನೆ:ಬಣಕಲ್ ಮಹಮ್ಮಾಯಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬಣಕಲ್ :ರಾಮ ಮಂದಿರ ಉದ್ಘಾಟನೆ ಸಮಾರಂಭವನ್ನು ಮಹಾ ಉತ್ಸವದ ರೀತಿಯಲ್ಲಿ ಆಚರಿಸಲು ಕೇಂದ್ರ ಸರ್ಕಾರ ಮತ್ತು ಸಂಘ ಪರಿವಾರ ನಾಯಕರು ತೀರ್ಮಾನಿಸಿ ಸರಣಿ ಕಾರ್ಯಕ್ರಮಗಳನ್ನು ರೂಪಿಸಿದೆ.

ಪ್ರಾಣ ಪ್ರತಿಷ್ಠಾಪನಾ ಸಮಯವಾದ ಹನ್ನೆರಡು ಗಂಟೆ 29 ನಿಮಿಷ 8 ಸೆಕೆಂಡ್‍ನಿಂದ 12 ಗಂಟೆ 30 ನಿಮಿಷ 32 ಸೆಕೆಂಡ್ ಸಮಯದಲ್ಲಿ ಬಣಕಲ್ ಮಹಮ್ಮಾಯಿ ದೇವಸ್ಥಾನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ರಾಮ ಜಪ, ಕುಣಿತ ಭಜನೆ ಮಹಾಮಂಗಳಾರತಿ ನಡೆಸಿ ದೇಶ, ರಾಜ್ಯಕ್ಕೆ ಶ್ರೀರಾಮನ ರಕ್ಷಣೆ ಇರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತದೆ. ನಂತರ ಅನ್ನ ಸಂತರ್ಪಣೆ ಇರುತ್ತದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಾಮನ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ಆಡಳಿತ ಮಂಡಳಿ ಮತ್ತು ವಿಶ್ವ ಹಿಂದೂ ಪರಿಷತ್ ಭಜರಂಗದಳ ಬಣಕಲ್ ಹೋಬಳಿ ಘಟಕ ಭಕ್ತಾದಿಗಳಲ್ಲಿ ವಿನಂತಿಸಿಕೊಂಡಿದ್ದಾರೆ.