ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ :ಮೂಡಿಗೆರೆ ಬಿಜೆಪಿ ಕಚೇರಿಯ ಎದುರೇ ಕಾರ್ಯಕರ್ತರ ನಡುವೆ ಮಾರಾಮರಿ

ಬಣಕಲ್: ಮೂಡಿಗೆರೆ ಸೇರಿದಂತೆ ಜಿಲ್ಲೆಯ ವಿವಿಧ ಮಂಡಲಗಳ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಮುಖಂಡರಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಅದರಂತೆ ಇಂದು ಪಕ್ಷದ ಬೂತ್ ಸಂಚಾಲಕರ ನೇಮಕದ ಪ್ರಕ್ರಿಯೆ ಬಗ್ಗೆ ಚರ್ಚಿಸಲು ಪಕ್ಷದ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಬಿಜಿಪಿಯ ಸಾಕಷ್ಟು ಕಾರ್ಯಕರ್ತರು ಭಾಗವಹಿಸಿದ್ದರು. ಸಭೆ ಮುಗಿದು ಹೊರಗೆ ಬರುತ್ತಿದ್ದಂತೆ ಮಾತಿಗೆ ಮಾತು ಬೆಳೆದು ಮಾರಾಮರಿ ಪ್ರಾರಂಭವಾಗಿದೆ ಮೂಡಿಗೆರೆ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರತನ್ ಅವರ ಮೇಲೆ ಹಲ್ಲೆಯಾಗಿದೆ. ಅವರು ಮೂಡಿಗೆರೆ ಎಂ.ಜಿ.ಎಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಸ ಅಧ್ಯಕ್ಷರ ನೇಮಕ ವಾಗುತ್ತಿದ್ದಂತೆ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಸಂಕಷ್ಟ ತಂದೊಡ್ಡಿದೆ.ಮುಂದಿನ ಲೋಕಸಭಾ ಚುನಾವಣೆ ಹೊತ್ತಲ್ಲಿ ಈ ರೀತಿಯ ಘಟನೆ ಕಾರ್ಯಕರ್ತರಿಗೆ ಬೇಸರ ತರಿಸಿದೆ.