ಮಳೆ ಮತ್ತೊಂದೆಡೆ ಹೆಚ್ಚಿದ ಸೊಳ್ಳೆ ಕಾಟ: ಸಾರ್ವಜನಿಕರಲ್ಲಿ ಡೆಂಗ್ಯೂ ಆತಂಕ:

*ಬಣಕಲ್ : ಮಲೆನಾಡಿನಾದ್ಯಂತ ಮುಂಗಾರು ಪೂರ್ವ ಮಳೆ ಅರ್ಭಟಿಸುತ್ತಿದೆ. ಮತ್ತೊಂದೆಡೆ ಸಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುತ್ತಿವೆ. ಸೊಳ್ಳೆ ಕಾಟದಿಂದ ಡೆಂಗ್ಯೂ ಹಾಗೂ ಕೆಮ್ಮು ಜ್ವರ ದಿಂದ ಜನ ಅನಾರೋಗ್ಯದಿಂದ ಆಸ್ಪತ್ರೆ ಸೇರುತ್ತಿದ್ದಾರೆ. ಕೆಲವು ದಿನಗಳಿಂದ ರೋಗಿಗಳಿಂದ ಆಸ್ಪತ್ರೆಗಳು ತುಂಬಿ‌ ಹೋಗಿದೆ.

ಬಣಕಲ್ ಭಾಗದಲ್ಲಿ ವೈರಲ್ ಜ್ವರದಿಂದಾಗಿ ಆಸ್ಪತ್ರೆಗೆ ಹೋಗುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ತಾಲೂಕಿನಾದ್ಯಂತ ವಿಷಮ ಶೀತ ಜ್ವರ ಹಾಗೂ ಡೆಂಗ್ಯೂ ಜ್ವರದ ಪ್ರಮಾಣ ಕೂಡಾ ಅಷ್ಟೇ ಪ್ರಮಾಣದಲ್ಲಿ ಕ್ಷಿಪ್ರಗತಿಯಲ್ಲಿ ಹೆಚ್ಚಾಗತೊಡಗಿದೆ. ಇದು ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಡೆಂಗ್ಯೂ ಜ್ವರ ಬಾರದಂತೆ ತಡೆಯಲು ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂಬುದು ಗ್ರಾಮಸ್ಥರ ಅಗ್ರಹವಾಗಿದೆ.

ಮಳೆಗಾಲದ ಆರಂಭದಲ್ಲಿ ನೀರು ನಿಲ್ಲುವ ಸ್ಥಳಗಳಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಜ್ವರ ಕಾಣಿಸಿಕೊಳ್ಳತ್ತದೆ ಅದಕ್ಕಾಗಿ ಸೊಳ್ಳೆಗಳ ಉತ್ಪತ್ತಿಯಾಗದಂತೆ ಎಚ್ಚರಿಕೆ ವಹಿಸುವುದು ರೋಗ ನಿಯಂತ್ರಣಕ್ಕೆ ಸೂಕ್ತ ಕ್ರಮವಾಗಿದೆ.ಗ್ರಾಮ ಪಂಚಾಯಿತಿ ಹಾಗೂ ಅರೋಗ್ಯ ಇಲಾಖೆ ಇದರ ಬಗ್ಗೆ ಮುತುವರ್ಜಿ ತೆಗೆದುಕೊಂಡು ಡೆಂಗ್ಯೂ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಔಷದಿ ಸಿಂಪಡಿಸುವ ಮುಖಾಂತರ ಡೆಂಗ್ಯೂ ನಿಯಂತ್ರಣಕ್ಕೆ ಮುಂದಾಗಬೇಕು ಎಂಬುದು ಗ್ರಾಮಸ್ಥರ ಅಗ್ರಹ.

ವರದಿ :✍️ಸೂರಿ ಬಣಕಲ್