ಬ್ರಹ್ಮಶ್ರೀ ನಾರಾಯಣ ಗುರು ಮಲಯಾಳಿ ಸಂಘ ಮತ್ತು ಬಣಕಲ್ ಗ್ರಾಮ ಪಂಚಾಯಿತಿ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ

ಬ್ರಹ್ಮಶ್ರೀ ನಾರಾಯಣಗುರು‌ ಮಲಯಾಳಿ ಸಂಘ ಮತ್ತು ಬಣಕಲ್ ಗ್ರಾಮ‌ ಪಂಚಾಯತಿ ವತಿಯಿಂದ ಸೋಮವಾರ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.

ನಿರೀಕ್ಷೆಗೂ ಮೀರಿ ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿದ್ದರು. ಸುಮಾರು 120 ಮಂದಿ ತಪಾಸಣೆ ಮಾಡಿಸಿಕೊಂಡಿದ್ದು ಸಾರ್ವಜನಿಕರ ಒತ್ತಾಯದ ಮೇರೆಗೆ (23 ಮಂಗಳವಾರ) ಇಂದು ಕೂಡ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ. ಜುಲೈ 23 ರ ಮಂಗಳವಾರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ.