ಬಣಕಲ್ :ಮೂಡಿಗೆರೆ ಬಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಣಕಲ್ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ಶಿಕ್ಷಕಿಯರು ಅಭಿನಂದನೆ ತಿಳಿಸಿದ್ದಾರೆ.
ಬಣಕಲ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀನಿವಾಸ್ ಸರ್ ಮಾತನಾಡಿ ಮಕ್ಕಳ ಸಾಧನೆಯ ಜೊತೆಗೆ ದೈಹಿಕ ಶಿಕ್ಷಕರಾದ ಪ್ರವೀಣ್ ಸರ್ ಅವರ ಶ್ರಮ ಹಾಗೆ ಶಾಲಾ ಆಡಳಿತ ಮಂಡಳಿಯ ಬೆಂಬಲದಿಂದ ಇವತ್ತು ಈ ಸಾಧನೆ ನೋಡುವಂತಾಯಿತು,ಮಕ್ಕಳಿಗೆ ವಿದ್ಯಾಸಂಸ್ಥೆ ವತಿಯಿಂದ ಹಾಗೂ ವೈಯಕ್ತಿಕವಾಗಿ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು.
ವರದಿ ✍️ಸೂರಿ ಬಣಕಲ್