ಹಿಂದೂ ವ್ಯಕ್ತಿಯ ಅಂತ್ಯ ಸಂಸ್ಕಾರ ನೆರವೇರಿಸಿ ಬಾವೈಕ್ಯತೆ ಮೆರೆದ ಚಕ್ಕಮಕ್ಕಿಯ ಮುಸ್ಲಿಂ ಬಾಂಧವರು

ಬಣಕಲ್ :ಜಾತಿ-ಧರ್ಮದ ಹೆಸರಿನಲ್ಲಿ ಹಗಜಗ್ಗಾಟಗಳು ನಡೆಯುತ್ತಿರುವ ನಡುವಲ್ಲೇ ಮೂಡಿಗೆರೆ ತಾಲ್ಲೂಕ್ಕಿನ ಚಕ್ಕಮಕ್ಕಿಯಲ್ಲೊಂದು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಘಟನೆಯೊಂದು ಸಮಾಜದ ಮುನ್ನೆಲೆಗೆ ಬಂದಿದೆ.

20ವರ್ಷಗಳ ಹಿಂದೆ ಮನೆಬಿಟ್ಟು ಬಂದಿದ್ದ ವ್ಯಕ್ತಿ ಇತ್ತೀಚೆಗೆ ಚಕ್ಕಮಕ್ಕಿಯ ಇಮ್ತಿಯಾಜ್ ಎಂಬುವವರ ನ್ಯೂ ಮಂಗಳೂರು ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ದುರದೃಷ್ಟವಶಾತ್ ವ್ಯಕ್ತಿ ಒಂದು ದಿನದ ಹಿಂದೆ ಹೃದಯಘಾತದಿಂದ ಮೃತಪಡುತ್ತಾರೆ. ಬಹಳ ವರ್ಷಗಳ ಹಿಂದೆಯೆ ಮೃತ ವ್ಯಕ್ತಿ ಮನೆ ಬಿಟ್ಟಿದ್ದರಿಂದ ಅವನಿಗೆ ಯಾರ ಸಂಪರ್ಕವೂ ಇರಲಿಲ್ಲ. ಮೃತ ವ್ಯಕ್ತಿಯ ಮೊಬೈಲ್ ಅನ್ನು ಪರಿಶೀಲಿಸಿ ಯುವಕರು ಸಂಬಂಧಿಗಳಿಗೆ ಕರೆ ಮಾಡಿ ಮಾಹಿತಿ ನೀಡುತ್ತಾರೆ. ಮೃತ ವ್ಯಕ್ತಿಗೆ ಇಬ್ಬರು ಪತ್ನಿಯರು ಮೊದಲ ಪತ್ನಿ ಮೃತಪಟ್ಟಿರುತ್ತಾರೆ ಎಂದುತಿಳಿದು ಬರುತ್ತದೆ, ಎರಡನೇ ಪತ್ನಿಗೆ ಕರೆ ಮಾಡಿ ವಿಷಯ ತಿಳಿಸಿದರೂ ಕೂಡ ಯಾರು ಬರುವುದಿಲ್ಲ, ಕೊನೆಗೆ ಮೊದಲ ಪತ್ನಿಯ ಮಗ ಆಳ್ವಾಸ್ ಕಾಲೇಜಿನಲ್ಲಿ ಇರುವುದನ್ನು ಖಚಿತ ಪಡಿಸಿಕೊಂಡ ಯುವಕರು ಕೊನೆಗೂ ಮಗನ ಕೈಯಾರೆ ತಂದೆಯ ಅಂತ್ಯ ಸಂಸ್ಕಾರ ಮಾಡಿಸಿ ಜನರ ಮನ ಗೆದ್ದಿದ್ದಾರೆ.

ಚಕ್ಕಮಕ್ಕಿಯ ಮುಸ್ಲಿಂ ಯುವಕರು ಹಾಗೂ ಸಮಾಜ ಸೇವಕ ಆರಿಫ್ ರವರು ಯುವಕನ ಜೊತೆಗೆ ನಿಂತು ಅಂತ್ಯ ಸಂಸ್ಕಾರವನ್ನು ಹಿಂದೂ ಸಂಪ್ರದಾಯದಂತೆ ನೆರವೇರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.

ಅಂತ್ಯಕ್ರಿಯೆ ನೆರವೇರಿಸಲು ಮೂಡಿಗೆರೆಯ ರುದ್ರಭೂಮಿಗೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಿದ್ದಾರೆ . ಈ ವೇಳೆ ಮುಸ್ಲಿಂ ಬಾಂಧವರೇ ಶವಕ್ಕೆ ಹೆಗಲು ಕೊಟ್ಟು ಹೊತ್ತು ಸಾಗಿ ನಂತರ ಹಿಂದೂ ಸಂಪ್ರದಾಯದಂತೆ ಪೂಜೆ ನೆರವೇರಿಸಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮುಸ್ಲಿಮ್ ಯುವಕರು ಕೊನೆವರೆಗೂ ರುದ್ರಭೂಮಿಯಲ್ಲೇ ಇದ್ದು ಎಲ್ಲವನ್ನೂ ನೋಡಿಕೊಂದಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ವರದಿ ✍️ಸೂರಿ ಬಣಕಲ್