ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಕಳೆದ ಕೆಲವರ್ಷಗಳಿಂದ ಹುಲಿ ದಾಳಿ ಮುಂದುವರೆದಿದೆ. ಇದೀಗ ಹುಲಿ ದಾಳಿಗೆ ಮತ್ತೊಂದು ಹಸು ಬಲಿಯಾಗಿದೆ. ಹೀಗಾಗಿ, ಕಾಡು ಪ್ರಾಣಿಗಳ ನಿರಂತರ ದಾಳಿಯಿಂದ ಜಾನುವಾರುಗಳನ್ನು ಸಾಕಿಕೊಂಡು ಬದುಕು ಸಾಗಿಸುತ್ತಿದ್ದ ರೈತ ಕುಟುಂಬ ಭವಿಷ್ಯದ ಬಗ್ಗೆ ಆಲೋಚಿಸುವಂತಾಗಿದೆ.
ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೆಗ್ಗುಡ್ಲು ಗ್ರಾಮದ ಅರುಣ್ ಅವರ ಹಸು ಕೆಲವು ದಿನಗಳಿಂದ ಕಾಣೆಯಾಗಿತ್ತು. ಮನೆಯವರು ಹುಡುಕಲು ಪ್ರಾರಂಭಿಸಿದಾಗ ಅದರ ಅವಶೇಷಗಳು ಅರ್ಧಂಬರ್ಧ ತಿಂದ ಸ್ಥಿತಿಯಲ್ಲಿ ತೋಟದ ಬಳಿ ಸಿಕ್ಕಿದೆ..ಹಾಗೆ ಹುಲಿ ಹೆಜ್ಜೆಯ ಗುರುತು ಕೂಡ ಸ್ಥಳದಲ್ಲಿ ಕಂಡಿದೆ.ಬಣಕಲ್ ಸುತ್ತಮುತ್ತಲಿನ ಮತ್ತಿಕಟ್ಟೆ, ಹೆಗ್ಗುಡ್ಲು ಬಿ.ಹೊಸಳ್ಳಿ, ಹೊಕ್ಕಳ್ಳಿ, ಭಾರತೀಬೈಲ್ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ನಿರಂತರವಾಗಿವೆ. ಇದರಿಂದ ಗ್ರಾಮಸ್ಥರು ಜೀವ ಭಯದಲ್ಲೇ ಕಾಫಿ ತೋಟದಲ್ಲಿ ಕೆಲಸ ಮಾಡಬೇಕಾಗಿದೆ.
ವರದಿ :✍️ಸೂರಿ ಬಣಕಲ್