ಭಾಷಣ ಸ್ಪರ್ಧೆಯಲ್ಲಿ ಶ್ರೀ ವಿದ್ಯಾ ಭಾರತಿ ವಿದ್ಯಾ ಸಂಸ್ಥೆಯ ಮಕ್ಕಳು ರಾಜ್ಯ ಮಟ್ಟಕ್ಕೆ ಆಯ್ಕೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ.ಶಾಂತಿವನ ಟ್ರಸ್ಟ್.( ರಿ ) ಇವರು ಪ್ರತೀ ವರ್ಷ ನಡೆಸುವ ವಿವಿಧ ಸ್ಪರ್ಧೆಗಳಲ್ಲಿ 2024-25ನೇ ಸಾಲಿನ ಸ್ಪರ್ಧೆಯಲ್ಲಿ ಶ್ರೀ ವಿದ್ಯಾಭಾರತಿ ವಿದ್ಯಾಸಂಸ್ಥೆಯ ಇಬ್ಬರು ವಿದ್ಯಾರ್ಥಿನಿಯರಾದ ಭಾಷಣಸ್ಪರ್ಧೆಯಲ್ಲಿ ಸನ್ನಿಧಿ.ಬಿ.ಎಸ್. ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಸಾನ್ವಿಕ.ಹೆಚ್.ಜಿ.ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ವಿದ್ಯಾರ್ಥಿನಿಯರನ್ನು ಶಾಲಾ ಆಡಳಿತ ಮಂಡಳಿ,ಶಾಲಾ ಶಿಕ್ಷಕ ವೃಂದ ,ಪೋಷಕರು ಅಭಿನಂದಿಸಿದ್ದಾರೆ.