ಬಿಜೆಪಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿರುವುದನ್ನು ಸಂಭ್ರಮಿಸಿ ಮೂಡಿಗೆರೆ ಬಿಜೆಪಿ ವತಿಯಿಂದ ಶನಿವಾರ ಇಲ್ಲಿ ವಿಜಯೋತ್ಸವ ಆಚರಿಸಲಾಯಿತು.
ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು, ದೆಹಲಿಯ ಕೇಜ್ರಿವಾಲ್ ಸರ್ಕಾರದ ಜನವಿರೋಧಿ ಆಡಳಿತ ವೈಖರಿಯನ್ನು ಖಂಡಿಸಿದರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಆಡಳಿತದಿಂದಾಗಿಯೇ ಈ ಗೆಲುವು ಸಾಧ್ಯವಾಗಿದೆ ಎಂದರು.
ವರದಿ ✍️ಸೂರಿ ಬಣಕಲ್