
ಚಿಕ್ಕಮಗಳೂರು :ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡಿನಲ್ಲಿ ಶೂಟೌಟ್ ಪ್ರಕರಣ ನಡೆದಿದ್ದು ತಂದೆಯೇ ಮಗನನ್ನು ಹತ್ಯೆ ಮಾಡಿದ್ದಾರೆ .
72 ವರ್ಷದ ಲಕ್ಷ್ಮಣ ತನ್ನ ಮಗ ಕಿರಣ್ (32ವರ್ಷ)ನನ್ನು ಶೂಟೌಟ್ ಮಾಡಿದ್ದಾರೆ.
ಪ್ರಕರಣ ತಲ್ಲಣಗೊಳಿಸಿದ್ದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ .
ಕೌಟುಂಬಿಕ ಕಲಹವೇ ಹತ್ಯೆಗೆ ಕಾರಣ ಎನ್ನಲಾಗುತ್ತಿದೆ .ಸುದ್ದಿ ತಿಳಿಯುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು .
