ಚಿಕ್ಕಮಗಳೂರು :ಜಿಲ್ಲೆಯ ಮಲೆನಾಡ ಪ್ರದೇಶಕ್ಕೆ ಮಾರಕ ಎನ್ನಲಾಗುತ್ತಿರುವ ಕಸ್ತೂರಿರಂಗನ್ ವರದಿಯಿಂದ ಗ್ರಾಮಗಳನ್ನು ಕೈಬಿಡುವಂತೆ ಹಕ್ಕೊತ್ತಾಯಕ್ಕೆ ಮೊದಲ ಜಯ ಲಭಿಸಿದೆ .
ಮೂಡಿಗೆರೆ ತಾಲೂಕು ಬಣಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗುಡ್ಲು ಗ್ರಾಮಸ್ಥರು ಪಂಚಾಯಿತಿಗೆ ಮನವಿಯೊಂದನ್ನು ಸಲ್ಲಿಸಿ ಕಸ್ತೂರಿರಂಗನ್ ವರದಿಯಿಂದ ಗ್ರಾಮವನ್ನು ಹೊರಗಿಡುವಂತೆ ಮನವಿ ಮಾಡಿದ್ದರು .
ಗ್ರಾಮ ಪಂಚಾಯಿತಿ ಸಭೆಯಲ್ಲೂ ಈ ಬಗ್ಗೆ ಬಿಸಿ ಬಿಸಿ ಚರ್ಚೆಯಾಗಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು .
ಜನರ ಭಾವನೆಗಳನ್ನು ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರುಗಳು ಒಮ್ಮತದಿಂದ ನಿರ್ಣಯ ತೆಗೆದುಕೊಂಡು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತಿಳಿಸಿದ್ದರ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಈ ನಿರ್ಧಾರ ತೆಗೆದು ಕೊಂಡಿದೆ.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧೀನ ಕಾರ್ಯದರ್ಶಿಗಳು ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಪತ್ರ ಮೂಲಕ ಈ ಅಂಶವನ್ನು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸತೀಶ್ ರವರು ಮಾತನಾಡಿ ಬಹುದಿನಗಳಿಂದ ಕಸ್ತೂರಿ ರಂಗನ್ ವರದಿ ಮಲೆನಾಡಿಗರನ್ನು ಕಂಗಲಾಗಿಸಿತ್ತು ಈ ದಿಸೆಯಲ್ಲಿ ನಮ್ಮ ಗ್ರಾಮ ಪಂಚಾಯಿತಿಯಿಂದ ನಮ್ಮ ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರು ಸೇರಿ ಚರ್ಚಿಸಿ ಮುಖ್ಯಮಂತ್ರಿಗಳಿಗೆ ಕಸ್ತೂರಿ ರಂಗನ್ ಕೈ ಬಿಡುವಂತೆ ಪತ್ರ ಮುಖೆನ ಮನವಿ ಮಾಡಿದ್ದೆವು ನಮ್ಮ ಮನವಿಗೆ ಸ್ಪಂದಿಸಿ ಹೆಗ್ಗುಡ್ಲು ಗ್ರಾಮವನ್ನು ಹೊರಗಿಡಲು ತೀರ್ಮಾನಿಸಿದೆ ಇದು ನಮಗೆ ಸಿಕ್ಕ ಜಯ ಎಂದು ಹರ್ಷ ವ್ಯಕ್ತಪಡಿಸಿದರು.

