ಬಣಕಲ್: ಬಹುತೇಕರು ಪ್ರತಿವರ್ಷದಂತೆ ವಿಜೃಂಭಣೆಯಿಂದ ಹಬ್ಬ ಆಚರಣೆ ಮಾಡಿದರೆ ಕೆಲವರು ಸರಳವಾಗಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಹಬ್ಬ ಆಚರಣೆ ಮಾಡಿದರು ಪ್ರತಿ ವರ್ಷ ವರಮಹಾಲಕ್ಷ್ಮಿ ಹಬ್ಬದಲ್ಲಿ ನೆರೆಹೊರೆಯವರನ್ನು ಕರೆದು ಅರಿಶಿನ ಕುಂಕುಮ, ಬಾಗಿನ ನೀಡಲಾಗುತ್ತಿತ್ತು. ರೋಗ ಹರಡುವ ಸಾಧ್ಯತೆ ಇರುವುದರಿಂದ ಅತ್ಯಂತ ಸರಳವಾಗಿ ಆಚರಣೆ ಮಾಡಿದರು.

ಕೊರೋನಾ ಸೋಂಕಿನ ಭೀತಿ ನಡುವೆಯೇ ವರಮಹಾಲಕ್ಷ್ಮಿ ಹಬ್ಬ ಆಚರಿಸಿದರು ಬೆಳಗ್ಗೆಯಿಂದ ವಸ್ತುಗಳ ಖರೀದಿಗೆ ಜನರು ಮುಗಿಬೀಳುತ್ತಿದ್ದ ದೃಶ್ಯ ಶುಕ್ರವಾರ ಬಣಕಲ್ ನಲ್ಲಿ ಕಂಡುಬಂದಿತು.
ಕೊರೋನಾ ಸಂಕಷ್ಟದ ನಡುವೆಯೂ ವರ ಮಹಾಲಕ್ಷ್ಮಿ ಹಬ್ಬಕ್ಕೆ ಹೂವಿನ ಮಾರುಕಟ್ಟೆಗಳಲ್ಲಿ ಖರೀದಿಯ ಭರಾಟೆ ಜೋರಾಗಿತ್ತು. ಹಲವು ದಿನಗಳಿಂದ ವ್ಯಾಪಾರವಿಲ್ಲದೆ ಕಂಗೆಟ್ಟಿದ್ದ ರೈತರಿಗೆ ವ್ಯಾಪಾರಿಗಳಿಗೆ ವರಮಹಾಲಕ್ಷ್ಮಿ ಹಬ್ಬ ತುಸು ನೆಮ್ಮದಿ ನೀಡಿತ್ತು.

ಬಹುತೇಕರು ಪ್ರತಿವರ್ಷದಂತೆ ವಿಜೃಂಭಣೆಯಿಂದ ಹಬ್ಬ ಆಚರಣೆಗೆ ಸಿದ್ಧತೆ ನಡೆಸಿದ್ದರೆ, ಕೆಲವರು ಸರಳವಾಗಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಹಬ್ಬ ಆಚರಿಸಿದರು.
