ಮೂಡಿಗೆರೆ ಕಿತ್ತಲೆ ಗಂಡಿ: ಗ್ರಾಮದಲ್ಲಿ ಹೇಮಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿರುಅಣೆಕಟ್ಟು ಕಟ್ಟಿದ್ದು ಅಲ್ಲಿಂದ ಮೂಡಿಗೆರೆ ಪಟ್ಟಣಕ್ಕೆ ಕುಡಿಯುವ ನೀರನ್ನು ಬಳಸುತ್ತಿದ್ದರು, ಮಳೆಯಿಂದಾಗಿ ನದಿಯಲ್ಲಿ ಕೊಚ್ಚಿಕೊಂಡು ಬಂದ ದೊಡ್ಡ ದೊಡ್ಡ ಮರದ ದಿಣ್ಣೆಗಳು ಅಡ್ಡಲಾಗಿ ನಿಂತು ನೀರಿನ ಹೊರಹರಿವು ಕಡಿಮೆಯಾಗಿತ್ತು ಹಾಗೆ ಸುತ್ತಮುತ್ತಲಿನ ರೈತರ ಜಮೀನಿಗೆ ನೀರು ನುಗ್ಗಿ ಹಾನಿ ಆಗುತ್ತಿತ್ತು, ಇದನ್ನು ಗಮನಿಸಿದ ಬಣಕಲ್ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ತಂಡದ ಸ್ವಯಂಸೇವಕರು, ಇಂದು ಕಾರ್ಯಚರಣೆ ಕೈಗೊಂಡಿದ್ದರು, ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಶೌರ್ಯ ತಂಡದ ಸಂಯೋಜಕರು ಗಳು ಮತ್ತು ಸ್ವಯಂಸೇವಕರು ತೆರವುಗೊಳಿಸಿ ಅಣೆಕಟ್ಟನ್ನು ಸ್ವಚ್ಛಗೊಳಿಸಿದರು, ಮತ್ತು ವಲಯದ ಮೇಲ್ವಿಚಾರಕರು ಹಾಗೂ ಸ್ಥಳೀಯ ಗ್ರಾಮಸ್ಥರು ಈ ಕಾರ್ಯಾಚರಣೆಯಲ್ಲಿ ಭಾಗಿಯಾದರು, ಈ ಕಾರ್ಯಾಚರಣೆ ಗಮನಿಸಿದ ಗ್ರಾಮಸ್ಥರು ಸ್ಥಳೀಯ ಜನಪ್ರತಿನಿಧಿಗಳು ಮತ್ತು ಮಾಧ್ಯಮ ಮಿತ್ರರು ಮೆಚ್ಚುಗೆ ವ್ಯಕ್ತಪಡಿಸಿದರು,
