ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಕಾರು ಡಿಕ್ಕಿ: ಮಹಿಳೆ ಸಾವು.

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರಿನಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆಕೆ ಮಗನಿಗೆ ಗಂಭೀರ ಗಾಯವಾಗಿದೆ.ಬೇಲೂರಿನ ಹನುಮಂತ ನಗರದಲ್ಲಿ ಈ ಘಟನೆ ನಡೆದಿದೆ. ಬೇಲೂರಿನಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಕಾರನ್ನು ಚಾಲಕ ರಿಪೇರಿಗಾಗಿ ಬೆಂಗಳೂರಿಗೆ ತೆಗೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೇಲೂರು ತಾಲೂಕಿನ ಹನುಮಂತ ನಗರದಲ್ಲಿ 55 ವರ್ಷದ ಹೂವಮ್ಮ ಹಾಗೂ ಅವರ ಮಗ ಬೈಕಿನಲ್ಲಿ ತೆರಳುತಿದ್ದ ವೇಳೆಯಲ್ಲಿ ಹಿಂಬದಿಯಿಂದ ಶಾಸಕರ ಕಾರು ಡಿಕ್ಕಿಯಾಗಿದೆ..ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.